Advertisement
ಕಳೆದ ನಾಲ್ಕು ದಿನಗಳ ಹಿಂದೆ ವಿನಯ್ ಪರ ವಕೀಲರು ಜಾಮೀನು ನೀಡುವಂತೆ ವಾದ ಮಂಡಿಸಿದ್ದರು. ಡಿ.9 ಕೆ ಸಿಬಿಐ ಪರ ವಕೀಲರು ವಾದ ಮಂಡಿಸಬೇಕಿತ್ತು ಆ ಪ್ರಕಾರ ಬುಧವಾರ ಸಿಬಿಐ ಪರ ವಕೀಲರು ಪ್ರತಿವಾದ ಮಂಡಿಸಿದರು. ದೆಹಲಿಯಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಕೇಂದ್ರ ಸರಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಸಿಬಿಐ ಪರ ವಾದ ಮಂಡನೆ ಮಾಡಿದರು. ಈ ವೇಳೆ ವಿನಯ ಕುಲಕರ್ಣಿ ಪ್ರಕರಣದ ಮಾಸ್ಟರ್ ಮೈಂಡ್. ಮೇಲಾಗಿ ಅವರು ಭಾರೀ ಪ್ರಭಾವಿ ವ್ಯಕ್ತಿ. ಒಂದು ವೇಳೆ ಜಾಮೀನು ಸಿಕ್ಕರೆ ಅವರು ಸಾಕ್ಷಿ ನಾಶ ಮಾಡೋ ಸಾಧ್ಯತೆ ಇದೆ. ಹೀಗಾಗಿ ಯಾವುದೇ ಕಾರಣಕ್ಕೂ ಅವರಿಗೆ ಜಾಮೀನನ್ನು ನೀಡಬಾರದು ಎಂದು ಎಸ್.ವಿ. ರಾಜು ವಾದ ಮಂಡಿಸಿದರು. ಈ ವಾದ ಆಲಿಸಿದ ಸಿಬಿಐ ವಿಶೇಷ ನ್ಯಾಯಾಲಯ ಅದಕ್ಕೆ ಪ್ರತಿವಾದ ಮಂಡಿಸಲು ವಿನಯ ಪರ ವಕೀಲರಿಗೆ ಅವಕಾಶ ನೀಡಿದರು.
Advertisement
ಡಿ.14ಕ್ಕೆ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ತೀರ್ಪನ್ನು ಕಾಯ್ದಿರಿಸಿದ ಸಿಬಿಐ ಕೋರ್ಟ್
07:16 PM Dec 09, 2020 | sudhir |
Advertisement
Udayavani is now on Telegram. Click here to join our channel and stay updated with the latest news.