Advertisement

ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಆಪ್ತ ಸೊಮು ನ್ಯಾಮಗೌಡ ಮತ್ತೆ ಸಿಬಿಐ ವಶಕ್ಕೆ

10:04 AM Jul 08, 2021 | Team Udayavani |

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಸೋಮು ನ್ಯಾಮಗೌಡ ಅವರನ್ನ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Advertisement

ಈಗಾಗಲೇ ಹಲವು ಬಾರಿ ಸೋಮು ಅವರನ್ನು ಸಿಬಿಐ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿತ್ತು. ಇದೀಗ ಇಂದು ಬೆಳಗ್ಗೆ ಗದಗದಲ್ಲಿ ನ್ಯಾಮಗೌಡ ಅವರನ್ನು ವಶಕ್ಕೆ ತೆಗೆದುಕೊಂಡು ಧಾರವಾಡ ಉಪನಗರ ಠಾಣೆ ಗೆ ಕರೆತರಲಾಗುತ್ತಿದೆ.

ಇದನ್ನೂ ಓದಿ:ಹಳ್ಳಿ ಹಳ್ಳಿಗೆ ಭೇಟಿ ನೀಡಿದವರಿಗೆ ಮಾತ್ರ ಟಿಕೆಟ್; ಮುಖಂಡರ ಹಿಂದೆ ಇದ್ದವರಿಗೆ ಇಲ್ಲ: ಡಿಕೆಶಿ

ಇಂದು ಸುಪ್ರೀಂ ಕೋರ್ಟ್ ನಲ್ಲಿ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆಗೆ ಬರಲಿದ್ದು ಇಂದೇ ಈ ಬೆಳವಣಿಗೆ ನಡೆದಿರುವುದು ಮಹತ್ವ ಪಡೆದುಕೊಂಡಿದೆ.

ಈಗಾಗಲೇ ವಿನಯ್ ಜಾಮೀನು ಅರ್ಜಿ ಹೈಕೋರ್ಟ್ ತಿರಸ್ಕರಿಸಿದ್ದರಿಂದ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next