Advertisement

ಕುಡಿದು ವಾಹನ ಚಾಲನೆ: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಬಂಧನ

10:26 PM Feb 28, 2022 | Team Udayavani |

ಮುಂಬಯಿ: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಮತ್ತೊಂದು ಸಲ್ಲದ ಕಾರಣದಿಂದ ಸುದ್ದಿಯಾಗಿದ್ದಾರೆ. ಕುಡಿದು ವಾಹನ ಚಾಲನೆ ಮಾಡಿ ಖಾಸಗಿ ಆಸ್ತಿಗೆ ಧಕ್ಕೆ ಮಾಡಿದ ಆರೋಪದ ಮೇಲೆ ಕಾಂಬ್ಳಿ ಅವರನ್ನು ಮುಂಬಯಿ ಪೊಲೀಸರು ರವಿವಾರ ರಾತ್ರಿ ಬಂಧಿಸಿದ್ದಾರೆ.

Advertisement

ಕಾಂಬ್ಳಿ ತಾವು ವಾಸಿಸುವ ಮುಂಬಯಿಯ ಬಾಂದ್ರಾದ ಮನೆಯೊಂದರ ಗೇಟ್‌ಗೆ ಕಾರ್‌ ಗುದ್ದಿ ನಷ್ಟ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಸದ್ಯ ಅವರನ್ನು ಜಾಮೀನಿನ ಮಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಸತಿ ಸಮುಚ್ಚಯದವರು ನೀಡಿದ ದೂರಿನ ಆಧಾರದಲ್ಲಿ ಕಾಂಬ್ಳಿ ಅವರ ಮೇಲೆ ಐಪಿಸಿ ಸೆಕ್ಷನ್‌ 279, 336 ಹಾಗೂ 427ರ ಅಡಿ ಬಾಂದ್ರಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next