Advertisement

ಕೋವಿಡ್ ನಿಯಮ ಉಲ್ಲಂಘಿಸಿ ಕಿಡದಾಳ ಜಾತ್ರೆ:12 ಜನರ ವಿರುದ್ಧ ಪ್ರಕರಣ ದಾಖಲು  

06:50 PM Apr 22, 2021 | Team Udayavani |

ಕೊಪ್ಪಳ: ತಾಲೂಕಿನ ಕಿಡದಾಳ ಗ್ರಾಮದಲ್ಲಿ ಗುರುವಾರ ಮಾರುತೇಶ್ವರ ಜಾತ್ರೋತ್ಸವ ನಡೆಸಿದ ಹಿನ್ನೆಲೆ 12 ಜನರ ಮೇಲೆ ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದಡಿ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಕಿಡದಾಳ ಗ್ರಾಮದ ಮಾರುತಿ ಪೂಜಾರ, ನಾಗರಾಜ ಬೇವಿನಮರದ, ನಾಗರಾಜ ಮುಂಡರಗಿ, ರಮೇಶ ಬಳ್ಳಾರಿ, ಸಾರೆಪ್ಪ ಮಾದಿಗ, ಸೋಮಪ್ಪ ಗುರಿಕಾರ, ಕೆಂಚಪ್ಪ ಬಳ್ಳಾರಿ ಸೇರಿದಂತೆ ಒಟ್ಟು 12 ಜನರ ಮೇಲೆ ಹಾಲವರ್ತಿ ಗ್ರಾಮ ಪಂಚಾಯಿತಿ ಪಿಡಿಒ ಮಹೇಶ ಸಜ್ಜನ್ ಅವರು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಆರಂಭವಾಗಿದೆ.

ಇಂದು ನಡೆದ ಜಾತ್ರೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲನೆ ಮಾಡಿಲ್ಲ. ಜಾತ್ರೆ ನಡೆಸಲು ಇಲಾಖೆಯ ಅನುಮತಿ ಪಡೆದಿಲ್ಲ. ಜಾತ್ರೆಗೆ ಆಗಮಿಸಿದ್ದ ಜನರು ಮಾಸ್ಕ್ ಧರಿಸಿಲ್ಲ. ಸಾಮಾಜಿಕ ಅಂತರವಂತೂ ಮಾಯವಾಗಿತ್ತು ಎನ್ನುವ ಆರೋಪ ಕೇಳಿ ಬಂದಿದೆ.

ಇನ್ನು ಜಾತ್ರೆಯಲ್ಲಿ ಪಾಲ್ಗೊಂಡಿದ್ದ ಜನರು ದೀರ್ಘದಂಡ ನಮಸ್ಕಾರ ಹಾಕಿದರು. ಕಾಯಿ ಕರ್ಪೂರ ಮಾಡಿಸಿ ಪೂಜಾ ಕೈಂಕರ್ಯಗಳನ್ನು ನೆರವೆರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next