Advertisement

ನಿಯಮಗಳ ನೆಪದಲ್ಲಿ ದೌರ್ಜನ್ಯ

09:55 AM Jul 20, 2018 | Team Udayavani |

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಹೆಸರಿನಲ್ಲಿ ನಗರ ಸಂಚಾರ ಪೊಲೀಸರು ಆಟೋ ಚಾಲಕರ ಮೇಲೆ ದೌರ್ಜನ್ಯವೆಸಗುತ್ತಿದ್ದಾರೆ ಎಂದು ಆರೋಪಿಸಿ ಪೀಸ್‌ ಆಟೋ ಮತ್ತು ಟ್ಯಾಕ್ಸಿ ಚಾಲಕರ ಅಸೋಸಿಯೇಷನ್‌ ಸದಸ್ಯರು ಗುರುವಾರ ಪುರಭವನದ ಎದುರು ಪ್ರತಿಭಟನೆ ನಡೆಸಿದರು.

Advertisement

15 ದಿನಗಳಿಂದ ಸಂಚಾರ ಪೊಲೀಸರು ನಿಯಮ ಉಲ್ಲಂಘನೆ ಆರೋಪದ ಮೇಲೆ ಸಾವಿರಾರು ಆಟೋಗಳನ್ನು ವಶಕ್ಕೆ ಪಡೆದು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ. 2-4 ಸಾವಿರ ರೂ.ವರೆಗೆ ದಂಡವಿಧಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಈ ವೇಳೆ ಮಾತನಾಡಿದ ಅಸೋಸಿಯೇಷನ್‌ ರಾಜ್ಯಾಧ್ಯಕ್ಷ ರಘು, ನಿಯಮ ಉಲ್ಲಂಘನೆ ಆರೋಪದಡಿ ರಸ್ತೆಗಳಲ್ಲಿ ಆಟೋಗಳನ್ನು ಜಪ್ತಿ ಮಾಡುತ್ತಿದ್ದಾರೆ. ಮೊಬೈಲ್‌ ಆ್ಯಪ್‌ ಆಧಾರಿತ ಓಲಾ, ಉಬರ್‌ ಸಂಸ್ಥೆಗಳ ಅಡಿಯಲ್ಲಿ ಓಡಿಸುತ್ತಿರುವ ಆಟೋಗಳನ್ನು ಗುರಿಯಾಗಿಸಿಕೊಂಡು ಈ ರೀತಿಯ ದೌರ್ಜನ್ಯ ನಡೆಸುತ್ತಿದ್ದಾರೆ. ಇನ್ನು ಕೆಲ ಆಟೋ ಚಾಲಕರಿಗೆ ಬ್ಯಾಡ್ಜ್ಗಳಿಲ್ಲ ಎಂದು ದಂಡ ವಿಧಿಸುತ್ತಿದ್ದಾರೆ. ಸುಪ್ರೀಂ ಕೋರ್ಟ್‌ ಬ್ಯಾಡ್ಜ್ಇಲ್ಲದೆ ಆಟೋ ಹಾಗೂ ಟ್ಯಾಕ್ಸಿ ಚಾಲನೆ ಮಾಡಬಹುದು ಎಂದು ಹೇಳಿದೆ. ಆದರೂ ಏಕಾಏಕಿ ಜಪ್ತಿ ಮಾಡಿ, ದಂಡ ವಿಧಿಸುತ್ತಿದ್ದಾರೆ. ಹೀಗಾಗಿ ದೌರ್ಜನ್ಯ ನಿಲ್ಲಬೇಕು ಎಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next