Advertisement

ಸಾಗರ: ಬಾಲ ಕಾರ್ಮಿಕ ಕಾಯ್ದೆ ಉಲ್ಲಂಘನೆ; ಪ್ರಕರಣ ದಾಖಲು

11:42 AM Mar 08, 2022 | Suhan S |

ಸಾಗರ: ತಾಲೂಕಿನ ಆವಿನಹಳ್ಳಿ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿಶಾಲೆ ಕಟ್ಟಡದ ನಿರ್ಮಾಣ ಕಾಮಗಾರಿಯಲ್ಲಿ ಬಾಲ ಕಾರ್ಮಿಕರನ್ನು ಬಳಸಿಕೊಂಡ ಆರೋಪದ ಮೇರೆಗೆ ಬೆಂಗಳೂರಿನ ರಾಮಕೃಷ್ಣ ಇನ್‌ಫ್ರಾಸ್ಟ್ರಕ್ಚರ್ ಸಂಸ್ಥೆಯ ವ್ಯವಸ್ಥಾಪಕ ಬಲರಾಮ ರೆಡ್ಡಿ ಅವರ ಮೇಲೆ ಸೋಮವಾರ ಪ್ರಕರಣ ದಾಖಲಾಗಿದೆ.

Advertisement

ಕಟ್ಟಡ ಕಾಮಗಾರಿ ಕೆಲಸಕ್ಕೆ ಛತ್ತೀಸ್‌ಗಢದಿಂದ 19 ಕಾರ್ಮಿಕರನ್ನು ಕರೆಸಿದ್ದು, ಈ ಪೈಕಿ ನಾಲ್ವರು ಬಾಲ ಕಾರ್ಮಿಕರು ಎಂದು ಪತ್ತೆಯಾಗಿದೆ. ಶಿವಮೊಗ್ಗದ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರ್ಮಿಕ ಇಲಾಖೆ ಅಧಿಕಾರಿ ಶಿಲ್ಪಾ ಅವರು ನೀಡಿರುವ ದೂರಿನ ಆಧಾರದ ಮೇರೆಗೆ ಬಾಲಕಾರ್ಮಿಕ ಕಾಯ್ದೆ ಉಲ್ಲಂಘನೆಯ ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next