Advertisement

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

10:04 AM Sep 09, 2024 | Team Udayavani |

ಆನೇಕಲ್‌: ಅಂಗಡಿಯಿಂದ ಮನೆಗೆ ಮರಳುತ್ತಿದ್ದ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ಯಲು ಯತ್ನಿಸಿದ ಮದ್ಯ ಸೇವಿಸಿದ್ದ ವ್ಯಕ್ತಿಯನ್ನು ಯುವಕರ ಗುಂಪೊಂದು ನಗ್ನಗೊಳಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬನ್ನೇರುಘಟ್ಟ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಧಾರವಾಡ ಮೂಲದ ರವಿಕುಮಾರ್‌ ಹಲ್ಲೆಗೊಳಗಾದ ಮದ್ಯ ವ್ಯಸನಿ. ಈತ, ಹಲವು ವರ್ಷಗಳಿಂದ ಬನ್ನೇರುಘಟ್ಟ ರಸ್ತೆಯ ಹೋಟೆಲ್‌ ಒಂದರಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ. ಮಹಿಳೆಯೊಬ್ಬರು ಮನೆಯಿಂದ ಕೊಂಚ ದೂರವಿದ್ದ ಅಂಗಡಿಯಿಂದ ಹಾಲು ತೆಗೆದುಕೊಂಡು ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ, ಕುಡಿದ ಅಮಲಿನಲ್ಲಿದ್ದ ರವಿಕುಮಾರ್‌, ಹಿಂದಿನಿಂದ ಬಂದು ಮಹಿಳೆಯ ಬಾಯಿ ಮುಚ್ಚಿ ನಿರ್ಜನ ಪ್ರದೇಶಕ್ಕೆ ಎಳೆದೊಯ್ಯಲು ಯತ್ನಿಸಿದಾಗ ಜೋರಾಗಿ ಕಿರುಚುತ್ತ ಮಹಿಳೆ ತಪ್ಪಿಸಿಕೊಂಡು ಓಡುತ್ತಿದ್ದಳು. ಈ ದೃಶ್ಯವನ್ನು ಕಂಡ ಅಲ್ಲಿದ್ದ ಯುವಕರ ಗುಂಪು, ಕುಡುಕನನ್ನು ನಗ್ನಗೊಳಿಸಿ ಥಳಿಸಿದ್ದಾರೆ. ಬನ್ನೇರುಘಟ್ಟ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next