Advertisement

Virajpete: ಮನೆಯಂಗಳದಲ್ಲಿ ಕಾಡಾನೆ; ಗ್ರಾಮಸ್ಥರಲ್ಲಿ ಆತಂಕ

08:50 PM Sep 23, 2024 | Team Udayavani |

ಮಡಿಕೇರಿ: ವಿರಾಜಪೇಟೆ ತಾಲೂಕಿನ ಬೆಳ್ಳರಿಮಾಡು ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ತೋಟಗಳಿಗೆ ನುಗ್ಗಿ ಬೆಳೆ ನಷ್ಟ ಮಾಡುತ್ತಿರುವ ಗಜಪಡೆ ಈಗ ಮನೆಯಂಗಳಕ್ಕೂ ಬರುತ್ತಿದೆ.

Advertisement

ಗ್ರಾಮದ ಪುಟ್ಟಿಚಂಡ ಪದ್ಮಿನಿ ಮುದ್ದಪ್ಪ ಅವರ ಕಾಫಿ ತೋಟಕ್ಕೆ ನಾಲ್ಕು ಕಾಡಾನೆಗಳು ದಾಳಿ ಮಾಡಿ ಬೆಳೆ ಹಾನಿ ಮಾಡಿದ್ದು, ಅವುಗಳ ಸಂಚಾರದ ದೃಶ್ಯ ಸಿಸಿಕೆಮರಾದಲ್ಲಿ ಸೆರೆಯಾಗಿದೆ. ಹಲವು ದಿನಗಳಿಂದ ಈ ಭಾಗದಲ್ಲಿ ಕಾಡಾನೆಗಳ ಹಿಂಡು ಉಪಟಳ ನೀಡುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ಇದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next