Advertisement

ದಿಲ್ಲಿ ಪೊಲೀಸರ ನಿಷ್ಕಲ್ಮಷ ಸೇವೆಗೆ ವಿರಾಟ್ ಕೊಹ್ಲಿ ಶ್ಲಾಘನೆ

11:13 AM Apr 12, 2020 | keerthan |

ಹೊಸದಿಲ್ಲಿ: ಕೋವಿಡ್-19 ದಿಗ್ಬಂಧನ ಇದ್ದರೂ ಅನಗತ್ಯವಾಗಿ ದೇಶಾದ್ಯಂತ ಪೊಲೀಸರು ಲಾಢಿ ಬೀಸಿ ಕಠಿಣ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಮತ್ತೊಂದು ಕಡೆ ಅನ್ನಾಹಾರವಿಲ್ಲದೆ ಪರದಾಡುತ್ತಿರುವ ಜನರಿಗೆ ಅನ್ನ, ನೀರು ನೀಡಿ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.

Advertisement

ಇಂತಹುದೇ ಸನ್ನಿವೇಶದಲ್ಲಿ ಹಸಿದವರಿಗೆ ಅನ್ನ ನೀಡಿ ನೆರವಾದ ದಿಲ್ಲಿ ಪೊಲೀಸರ ಕಾರ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಶ್ಲಾಘಿಸಿದ್ದಾರೆ.

ದೇಶಾದ್ಯಂತ ಇಂತಹ ವಿಷಮ ಪರಿಸ್ಥಿತಿಯಲ್ಲಿ ಪೊಲೀಸರು ಮಾಡುತ್ತಿರುವ ಸಹಾಯವನ್ನು ನೋಡಿ ಹೃದಯ ತುಂಬಿ ಬಂದಿದೆ. ಅದರಲ್ಲೂ ದಿಲ್ಲಿ ಪೊಲೀಸರು ಕರ್ತವ್ಯದಲ್ಲಿರುವಾಗಲೇ ಬಡ ಜನರಿಗೆ ದಿನನಿತ್ಯದ ಆಹಾರವನ್ನು ನೀಡುತ್ತಿದ್ದಾರೆ. ಇದು ನಿಜಕ್ಕೂ ಮಾದರಿ ಸೇವೆ, ಒಳ್ಳೆಯ ಕೆಲಸ ಮಾಡಿದ್ದೀರಿ, ಇದೇ ರೀತಿಯಲ್ಲಿ ನಿಮ್ಮ ಸೇವೆಯನ್ನು ಮುಂದುವರಿಸಿ ಎಂದು ವಿರಾಟ್ ಕೊಹ್ಲಿ ಟ್ವಿಟ್ಟರ್ ನಲ್ಲಿ ಪ್ರಶಂಸಿದ್ದಾರೆ. ಇದಕ್ಕೆ ಪ್ರತಿಕ್ರಯಿಸಿರುವ ದಿಲ್ಲಿ ಪೊಲೀಸ್ ವಿರಾಟ್ ಕೊಹ್ಲಿಗೆ ಧನ್ಯವಾದ ಸಲ್ಲಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next