Advertisement
ಪ್ರವಾಸಿ ತಾಣ ಅಥವಾ ಧಾರ್ಮಿಕ ಕೇಂದ್ರಗಳನ್ನು ನೋಡಲು ಬರುವ ಪ್ರವಾಸಿಗರಿಗೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಇರುವ ಪ್ರವಾಸಿ ತಾಣಗಳ ಕಿರು ಪರಿಚಯದ ಜತೆಗೆ ಆ ಸ್ಥಳಗಳಿಗೆ ಪ್ರವಾಸಿಗರನ್ನು ಆಕರ್ಷಿಸಲು ವರ್ಚುವಲ್ ವ್ಯವಸ್ಥೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಜಿಲ್ಲಾಡಳಿತ ನಿರ್ಧರಿಸಿದೆ.
Related Articles
Advertisement
ತ್ರಾಸಿಯಿಂದ ಮರವಂತೆ ವರೆಗೂ ಯಾವ ರೀತಿ ಬೀಚ್ ಅಭಿವೃದ್ಧಿ ಮಾಡಬಹುದು ಮತ್ತು ಈ ಬೀಚ್ನಲ್ಲಿ ಪ್ರವಾಸಿಗರ ಸಂಖ್ಯೆ ದಿನೆದಿನೇ ಹೆಚ್ಚುತ್ತಿರುವುದರಿಂದ ಸುರಕ್ಷತೆಗೂ ಆದ್ಯತೆ ನೀಡುವ ಬಗ್ಗೆಯೂ ಜಿಲ್ಲಾಡಳಿತ ನಿಗಾ ವಹಿಸುತ್ತಿದೆ.
ಧಾರ್ಮಿಕ ಕೇಂದ್ರಕ್ಕೂ ಒತ್ತು:
ಕರಾವಳಿಯಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ವಿಪುಲವಾದ ಅವಕಾಶವಿದೆ. ಇದನ್ನು ಸಮರ್ಪಕವಾಗಿ ಬಳಸಿಕೊಂಡು, ಪ್ರವಾಸೋದ್ಯಮಕ್ಕೆ ಹೊಸ ರೂಪ ನೀಡಿ, ಉದ್ಯೋಗಾವಕಾಶ ಹೆಚ್ಚಳ ಮಾಡಲಿದ್ದೇವೆ. ಧಾರ್ಮಿಕ ಕೇಂದ್ರಗಳು ಹೆಚ್ಚಿರುವುದರಿಂದ ಧಾರ್ಮಿಕ ಪ್ರವಾಸೋದ್ಯಮಕ್ಕೂ ಒತ್ತು ನೀಡುವ ಬಗ್ಗೆ ಇಲಾಖೆಯ ಮೂಲದಿಂದ ತಿಳಿದು ಬಂದಿದೆ.
ಬೀಚ್ಗಳ ಅಭಿವೃದ್ಧಿ :
ಜಿಲ್ಲೆಯ ಪ್ರಮುಖ ಬೀಚ್ಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಅರಬೀ ಸಮುದ್ರ ಮತ್ತು ಸೌಪರ್ಣಿಕಾ ನದಿಯ ನಡುವಿನಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ “ಮರವಂತೆ ಬೀಚ್’ ಪ್ರದೇಶವನ್ನು ಇನ್ನಷ್ಟು ಅಭಿವೃದ್ಧಿಗೆ ಜಿಲ್ಲಾಡಳಿತ ಮುಂದಾಗಿದೆ.
ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗೆ “ವರ್ಚುವಲ್ ಟೂರ್’ ವ್ಯವಸ್ಥೆ ಜಾರಿಗೆ ತರಲಿದ್ದೇವೆ. ಇದರ ಜತೆಗೆ ಮರವಂತೆ ಬೀಚ್ ಅಭಿವೃದ್ಧಿಗೂ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಅನೇಕ ಪ್ರವಾಸಿ ತಾಣವಿದ್ದು, ಉದ್ಯೋಗಾವಕಾಶ ಹೆಚ್ಚಿಸಲು ಅವಕಾಶವಿದೆ. ಹೀಗಾಗಿ ಪ್ರವಾಸೋದ್ಯಮ ಕ್ಷೇತ್ರ ಪೂರ್ಣವಾಗಿ ತೆರೆದುಕೊಳ್ಳಲು ಎಲ್ಲರೂ ಕೊರೊನಾ ಲಸಿಕೆ ಪಡೆಯುವುದು ಅನಿವಾರ್ಯವಾಗಿದೆ.-ಕೂರ್ಮಾ ರಾವ್ ಎಂ., ಜಿಲ್ಲಾಧಿಕಾರಿ
-ರಾಜು ಖಾರ್ವಿ ಕೊಡೇರಿ