Advertisement

ವೈರಸ್ ಸೋಂಕಿತರು ಚಿಕಿತ್ಸೆಯಿಲ್ಲದೆ ನರಳುತ್ತಿದ್ದಾರೆ, ಸಚಿವರಲ್ಲಿ ಸಮನ್ವಯವಿಲ್ಲ: HDK ಕಿಡಿ

10:04 AM Jul 02, 2020 | Mithun PG |

ಬೆಂಗಳೂರು: ಕೋವಿಡ್-19 ಸೋಂಕು ಪೀಡಿತರು ಬೆಡ್ ಗಳಿಲ್ಲದೆ, ಚಿಕಿತ್ಸೆ ಇಲ್ಲದೆ ಮನೆಯಲ್ಲೇ ನರಳಿ ಸಾಯುತ್ತಿದ್ದಾರೆ. ಆರಂಭಿಕ ಹಂತದಲ್ಲೇ ವೈರಸ್ ನಿಯಂತ್ರಣದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Advertisement

ಸರಣಿ ಟ್ವೀಟ್ ಮೂಲಕ  ಸರ್ಕಾರದ ಕ್ರಮಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಕಳೆದ ಮೂರು ತಿಂಗಳಿಂದ ಮುಖ್ಯಮಂತ್ರಿ ಸೇರಿದಂತೆ ಸಚಿವರುಗಳು ಮಾತಿನ ಮಂಟಪ ಕಟ್ಟುವುದರಲ್ಲಿ ಕಾಲ ಕಳೆದರು. ಸರ್ಕಾರ ಈಗ ಇಂಗು ತಿಂದ ಮಂಗನಂತಾಗಿದ್ದು, ಸೋಂಕಿತರ ಸಂಖ್ಯೆಯ ಗಣನೀಯ ಏರಿಕೆಯನ್ನು ತಡೆಯಲು ಪೇಚಾಡುತ್ತಿದೆ.

ಸರ್ಕಾರ ಇನ್ನಾದರೂ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಲಿ. ಕೋವಿಡ್ ಸಮರ್ಪಕ ನಿರ್ವಹಣೆಗೆ ನಾನು ಕೊಟ್ಟ ಹತ್ತಾರು ಸಲಹೆಗಳನ್ನು ಲಘುವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಲಿ. ನೆರೆಯ ಕೇರಳ ಸರ್ಕಾರ ವೈರಸ್ ತಡೆಗೆ ಕೈಗೊಂಡ ಕ್ರಮಗಳ ‘ಸಿದ್ದ’ ಮಾದರಿ ಕಣ್ಣೆದುರಿಗಿದೆ. ಆದರೆ, ರಾಜ್ಯದ ಸಚಿವರಲ್ಲಿ ಸಮನ್ವಯವಿಲ್ಲ, ಒಬ್ಬೊಬ್ಬರದು ಒಂದೊಂದು ನಿಲುವು. ಇವರ ತಿಕ್ಕಾಟದಲ್ಲಿ ರಾಜ್ಯದ ಜನತೆ ಹೈರಾಣಾಗಿದ್ದಾರೆ ಎಂದು ತಿಳಿಸಿದರು.

ಕೋವಿಡ್ ಸೋಂಕು ಶರವೇಗದಲ್ಲಿ ಎಲ್ಲೆಡೆ  ವ್ಯಾಪಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ರಾಜ್ಯದಾದ್ಯಂತ ಸೋಂಕಿತರು ಚಿಕಿತ್ಸೆಯಿಲ್ಲದೆ ಸಾಯುತ್ತಿರುವ  ಘಟನೆಗಳು ಕರುಳು ಹಿಂಡುತ್ತಿವೆ. ಸರ್ಕಾರ ಇನ್ನೂ ಮೈಮರೆತರೆ ಸೋಂಕಿತರು ಬೀದಿ ಬೀದಿಯಲ್ಲಿ ಸಾಯುವ ಸ್ಥಿತಿ ನಿರ್ಮಾಣವಾಗುತ್ತದೆ.

ಸರ್ಕಾರ ಕೇವಲ ಸರ್ವಪಕ್ಷಗಳ ಸಭೆ ಕರೆದರೆ ಸಾಲದು. ಆ ಸಭೆಯಲ್ಲಿ ನೀಡುವ ಸಲಹೆಗಳನ್ನು, ತೆಗೆದುಕೊಂಡ ನಿರ್ಣಯಗಳನ್ನು ಕಾರ್ಯರೂಪಕ್ಕೆ ತರಬೇಕು. ಕಳೆದ 3 ತಿಂಗಳಿನಿಂದ ನಾವು ನೀಡಿರುವ ಒಂದು ಸಲಹೆಯನ್ನೂ ಕಾರ್ಯರೂಪಕ್ಕೆ ತಂದಿಲ್ಲ. ಸರ್ಕಾರದ ಅವ್ಯವಸ್ಥೆಗೆ ಬಡ, ಮಧ್ಯಮ ವರ್ಗದ ಜನರು ಈಗ ಜೀವ ತೆರಬೇಕಾಗಿದೆ ಎಂದು ಇದೇ ವೇಳೆ ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next