Advertisement

ಅನಿಲ ಸೋರಿಕೆ ದುರಂತ: ಸಾವಿನ ಸಂಖ್ಯೆ 11, ಸ್ಥಳೀಯ ಗ್ರಾಮದ ನೂರಾರು ಮಂದಿ ಪ್ರಜ್ಞಾಹೀನ

08:27 AM May 08, 2020 | Nagendra Trasi |

ಆಂಧ್ರಪ್ರದೇಶ: ಆಂಧ್ರಪ್ರದೇಶದ ವಿಶಾಖಪಟ್ಟಣಂನ ವೆಂಕಟಾಪುರದಲ್ಲಿನ ಎಲ್ ಜಿ ಪಾಲಿಮರ್ಸ್ ನಲ್ಲಿ ಸಂಭವಿಸಿದ ಅನಿಲ ಸೋರಿಕೆ ದುರಂತದಲ್ಲಿ ಒಂದು ಮಗು ಸೇರಿದಂತೆ 11 ಮಂದಿ ಸಾವನ್ನಪ್ಪಿದ್ದಾರೆ. ತಲೆನೋವು, ಉಸಿರಾಟದ ತೊಂದರೆ ಹಾಗೂ ವಾಂತಿಯಿಂದ ಸಾವಿರಾರು ಗ್ರಾಮಸ್ಥರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿ ತಿಳಿಸಿದೆ.

Advertisement

ಗುರುವಾರ ಬೆಳಗ್ಗಿನ ಜಾವ 2.30ರ ಸುಮಾರಿಗೆ ಎಲ್ ಜಿ ಪಾಲಿಮರ್ಸ್ ಕೆಮಿಕಲ್ ಪ್ಲ್ಯಾಂಟ್ ನಲ್ಲಿ ಅನಿಲ ಸೋರಿಕೆಯಾಗಿತ್ತು. ಸುತ್ತಮುತ್ತಲಿನ ಗ್ರಾಮಗಳಲ್ಲಿ ಇರುವ ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗುತ್ತಿದೆ. ರಸ್ತೆ ಮೇಲೆ ನೂರಾರು ಮಂದಿ ಪ್ರಜ್ಞಾಹೀನರಾಗಿ ಬಿದ್ದಿರುವ ಭಯಾನಕ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಕ್ಕಳನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಪೋಷಕರು ಆ್ಯಂಬುಲೆನ್ಸ್ ಬಳಿ ಸಾಗುತ್ತಿರಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿ ವಿವರಿಸಿದೆ.

ಅನಿಲ ಸೋರಿಕೆಯಿಂದಾಗಿ ಹತ್ತಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 5ಸಾವಿರ ಜನರ ಅಸ್ವಸ್ಥರಾಗಿದ್ದಾರೆ. ಪ್ಲ್ಯಾಂಟ್ ಇದ್ದ ಸುಮಾರು ಮೂರು ಕಿಲೋ ಮೀಟರ್ ದೂರದವರೆಗೆ ಅನಿಲ ಹರಡಿದ್ದು ಜನರ ಮೇಲೆ ಪರಿಣಾಮ ಬೀರಿದೆ ಎಂದು ವರದಿ ತಿಳಿಸಿದೆ. ಹಲವು ಪ್ರಾಣಿ, ಪಕ್ಷಿಗಳು ಸಾವನ್ನಪ್ಪಿರುವುದಾಗಿ ವರದಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next