Advertisement

ನಿರೀಕ್ಷಣಾ ಜಾಮೀನು ವಿಚಾರಣೆಗೆ ಮುನ್ನವೇ ವಿಷ್ಣು ಶರಣು

06:45 AM Oct 04, 2017 | Team Udayavani |

ಬೆಂಗಳೂರು: ಮದ್ಯದ ಅಮಲಿನಲ್ಲಿ ಇತ್ತೀಚೆಗೆ ಅತೀವೇಗವಾಗಿ ಕಾರು ಚಲಾಯಿಸಿ ಅಪಘಾತ ಮಾಡಿ ಸಾರ್ವಜನಿಕರಿಂದ ಹಲ್ಲೆಗೊಳಗಾಗಿ ಮಲ್ಯ ಆಸ್ಪತ್ರೆಯಿಂದ ಪರಾರಿಯಾಗಿದ್ದ ಟಿಟಿಡಿ ಮಾಜಿ ಅಧ್ಯಕ್ಷ ದಿ. ಆದಿಕೇಶವಲು ಮೊಮ್ಮಗ ವಿಷ್ಣು ಮಂಗಳವಾರ ರಾತ್ರಿ ಸಿಸಿಬಿ ಅಧಿಕಾರಿಗಳ ಮುಂದೆ ಶರಣಾಗಿದ್ದಾನೆ.

Advertisement

ಸೆ. 28ರಂದು ಅಪಘಾತವೆಸಗಿದ ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವಿಷ್ಣು ಹೆಚ್ಚಿನ ಚಿಕಿತ್ಸೆಗಾಗಿ ಮಲ್ಯ ಆಸ್ಪತ್ರೆಯಲ್ಲಿ ದಾಖಲಾಗಿದ್ದ. ಸೆ. 29ರಂದು ಬೆಳಗ್ಗೆ ಪೊಲೀಸರ ಕಣ್ಣು ತಪ್ಪಿಸಿ ನಾಪತ್ತೆಯಾಗಿದ್ದ. ಬಳಿಕ ಹೈದರಾಬಾದ್‌ ಹಾಗೂ ತಿರುಪತಿಯಲ್ಲಿ ತಲೆಮರೆಸಿದ್ದ ಆರೋಪಿ, ಅನಂತರ ಮಡಿಕೇರಿಗೆ ಹೋಗಲು ಯೋಚಿಸಿದ್ದ. ಸಿಸಿಬಿ ಪ್ರಕರಣದ ತನಿಖೆ ಚುರುಕುಗೊಳಿಸುತ್ತಿದ್ದಂತೆ ಬಂಧನ ಭೀತಿಯಿಂದ ವಿಷ್ಣು ಶರಣಾಗಿದ್ದಾನೆ.

Advertisement

Udayavani is now on Telegram. Click here to join our channel and stay updated with the latest news.

Next