Advertisement

ಬೆಂಗಳೂರಿನಲ್ಲಿ ನಟ ವಿಷ್ಣುವರ್ಧನ್ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳು

10:57 AM Dec 26, 2020 | keerthan |

ಬೆಂಗಳೂರು: ಇಲ್ಲಿನ ಮಾಗಡಿ ರಸ್ತೆಯಲ್ಲಿರುವ ಕನ್ನಡ ಚಿತ್ರರಂಗದ ಮೇರು ನಟ ಡಾ| ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ ಘಟನೆ ನಡೆದಿದೆ.

Advertisement

ನಗರದ ಮಾಗಡಿ ರಸ್ತೆಯಲ್ಲಿರುವ ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನು ಶುಕ್ರವಾರ ತಡರಾತ್ರಿ ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಸ್ಥಳದಲ್ಲೇ ವಿಷ್ಣು ಅಭಿಮಾನಿಗಳು ಸೇರಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:2020 ಬಾಲಿವುಡ್ ಸಿನಿಮಾಗಳ ರೌಂಡಪ್… ಕೋವಿಡ್ ಕಾಲದಲ್ಲಿ ಮಿಂಚಿದ ಓಟಿಟಿ

ಈ ಹಿಂದೆಯೂ ಇದೇ ಸ್ಥಳದಲ್ಲಿ ಪ್ರತಿಮೆ ಧ್ವಂಸವಾಗಿತ್ತು. ಆಗ ಪ್ರತಿಮೆಯನ್ನೇ ಹೊತ್ತೊಯ್ದಿದ್ದರು.  ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next