Advertisement

ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಸಂಸ್ಕೃತಿ ಉತ್ಸವ, “ವಿಶ್ವಪ್ರಭಾ’ಪುರಸ್ಕಾರ

12:09 AM Jan 15, 2023 | Team Udayavani |

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ವತಿಯಿಂದ ಎಂಜಿಎಂ ಕಾಲೇಜಿನ ಸಹಕಾರದೊಂದಿಗೆ ಜ. 15ರ ಸಂಜೆ 5.30ಕ್ಕೆ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಸಂಸ್ಕೃತಿ ಉತ್ಸವ ನಡೆಯಲಿದೆ.

Advertisement

ಕನ್ನಡ ನಾಡು, ನುಡಿ, ಸಂಸ್ಕೃತಿ, ಸಾಹಿತ್ಯಕ್ಕೆ ಕೊಟ್ಟ ಅನನ್ಯ ಸೇವೆಗಾಗಿ ಹಿರಿಯ ಪತ್ರಿಕೋದ್ಯಮಿ ತರಂಗ ವಾರಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ| ಸಂಧ್ಯಾ ಎಸ್‌. ಪೈ ಅವರಿಗೆ ಪ್ರಭಾವತಿ, ಉಡುಪಿ ವಿಶ್ವನಾಥ ಶೆಣೈ ಪ್ರಾಯೋಜಿತ “ವಿಶ್ವಪ್ರಭಾ’ ಪುರಸ್ಕಾರವನ್ನು ನೀಡಲಾಗುವುದು. ಪ್ರಶಸ್ತಿಯು ಪ್ರಶಸ್ತಿ ಪತ್ರ, ಫ‌ಲಕದೊಂದಿಗೆ 1 ಲ.ರೂ. ನಗದು ಬಹುಮಾನ ಒಳಗೊಂಡಿದೆ.

ಮಾಜಿ ಮುಖ್ಯಮಂತ್ರಿ, ಸಾಹಿತಿ ಡಾ| ಎಂ. ವೀರಪ್ಪ ಮೊಲಿ ಅವರು ಉದ್ಘಾಟಿಸಲಿದ್ದು, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಅಧ್ಯಕ್ಷತೆ ವಹಿಸುವರು. ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ ಅಭಿನಂದನ ಭಾಷಣಗೈಯ್ಯಲಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ| ಲಕ್ಷ್ಮಿ ನಾರಾಯಣ ಕಾರಂತ ಉಪಸ್ಥಿತರಿರಲಿದ್ದಾರೆ. ಆಬಳಿಕ ಜಾದೂಗಾರ ಪ್ರೊ| ಶಂಕರ್‌, ಜೂ| ಶಂಕರ್‌ ನೇತೃತ್ವದ ಗಿಲಿ ಗಿಲಿ ಮ್ಯಾಜಿಕ್‌ ಪ್ರದರ್ಶನವಿರಲಿದೆ ಎಂದು ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next