Advertisement

2024ಕ್ಕೆ ಶ್ರೀ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾನಾ ಕಾರ್ಯಕ್ರಮ: ಪೇಜಾವರ ಶ್ರೀ

09:58 PM Dec 12, 2022 | Team Udayavani |

ದಾವಣಗೆರೆ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, 2024ರ ಮಕರ ಸಂಕ್ರಾಂತಿಯ ನಂತರ ಪ್ರಾಣ ಪ್ರತಿಷ್ಠಾಪನಾ ಕಾರ್ಯ ನೆರವೇರಲಿದೆ ಎಂದು ಉಡುಪಿ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀರಾಮ ಮಂದಿರದ ಕಂಬಗಳು ಹಾಗೂ ಸುತ್ತಲಿನ ಗೋಡೆಯನ್ನು ಕಟ್ಟುವ ಕೆಲಸ ನಡೆಯುತ್ತಿದೆ. ಈಗಾಗಲೇ ಐದಾರು ಅಡಿಗಳಷ್ಟು ಎತ್ತರಕ್ಕೆ ಬಂದಿದೆ. 2023ರ ಅಂತ್ಯಕ್ಕೆ ಎಲ್ಲ ಕೆಲಸಗಳು ಮುಕ್ತಾಯವಾಗಲಿವೆ.

2024ರ ಜನವರಿಯಲ್ಲಿ ಸಂಕ್ರಾಂತಿ ಹಬ್ಬದ ನಂತರ ಶುಭ ಮುಹೂರ್ತದಲ್ಲಿ ಪ್ರಾಣ ಪ್ರತಿಷ್ಠಾಪನಾ ಕಾರ್ಯ ನೆರವೇರಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next