Advertisement

ವಿಶ್ವನಾಥ್ ಅವರಿಗೆ ಪೂರ್ವಾಶ್ರಮದ ಪ್ರಭಾವ ಕಡಿಮೆಯಾಗಿಲ್ಲ: ಪ್ರತಾಪ್ ಸಿಂಹ

01:15 PM Aug 29, 2020 | Mithun PG |

ಮೈಸೂರು: ವಿಶ್ವನಾಥ್ ಅವರು ಬಿಜೆಪಿ ಸೇರಿದ್ದಾರೆ ಆದರೆ ಅವರಿಗಿನ್ನು ಪೂರ್ವಾಶ್ರಮದ ಪ್ರಭಾವ ಇನ್ನೂ ಕಡಿಮೆಯಾದಂತಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.

Advertisement

ಟಿಪ್ಪುಸುಲ್ತಾನ್ ಸ್ವತಂತ್ರ ಹೊರಾಟಗಾರ, ಈ ನೆಲದ ಮಗ ಎಂಬ ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಜ್ಞಾನ ಹೊಂದಿದ್ದೇನೆ ಎನ್ನುವವರು ಕನಿಷ್ಠ ಜ್ಞಾನ ಇಟ್ಟುಕೊಂಡು ಮಾತನಾಡಬೇಕು ಎಂದು ಹೇಳಿದರು.

ಸಾಹಿತ್ಯ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಕಾಲಿರಿಸಿದ್ದಾರೆ. ಹಾಗಾಗಿ ಮೈಸೂರಿನ ಇತಿಹಾಸವನ್ನು ಸರಿಯಾಗಿ ತಿಳಿದುಕೊಂಡು ಮಾತನಾಡಬೇಕು. ಮೈಸೂರಿನ ಯದು ವಂಶವನ್ನು ನಿರ್ನಾಮ ಮಾಡಲು ಹೊರಟವರು ಯಾರು, ಕನ್ನಡ ಭಾಷೆ ಮೇಲೆ ಪ್ರಹಾರ ನಡೆಸಿದ್ದು ಟಿಪ್ಪು. ಹಾಗಾಗಿ ಟಿಪ್ಪುವನ್ನು ವೀರ, ಶೂರ ಎಂದು ಹೇಳಲಾಗದು. ಟಿಪ್ಪು ಸತ್ತಾಗ ಸ್ವಾತಂತ್ರ್ಯ ಹೋರಾಟವೇ ಶುರುವಾಗಿರಲಿಲ್ಲ‌ ಎಂದು ತಿರುಗೇಟು ನೀಡಿದರು.

ವಿಶ್ವನಾಥ್ ಮುಂದಾದರು ಕನಿಷ್ಠ ಜ್ಞಾನ ಇಟ್ಟುಕೊಂಡು ಮಾತನಾಡಲಿ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next