Advertisement

ವಿಧಾನ ಪರಿಷತ್‌ಗೆ ವಿಶ್ವನಾಥ್, ಎಂಟಿಬಿ ಹಾಗೂ ಶಂಕರ್‌ ಹೆಸರು ಶಿಫಾರಸ್ಸು

05:42 PM Jun 16, 2020 | keerthan |

ಮೈಸೂರು: ವಿಧಾನ ಪರಿಷತ್ ಚುನಾವಣೆಗೆ ರಾಜ್ಯ ಬಿಜೆಪಿ ಎಚ್. ವಿಶ್ವನಾಥ್, ಎಂಟಿಬಿ ನಾಗರಾಜ್ ಹಾಗೂ ಆರ್. ಶಂಕರ್‌ ಅವರ ಹೆಸರನ್ನು ಅಂತಿಮಗೊಳಿಸಿ ಶಿಫಾರಸ್ಸು ಮಾಡಲಾಗಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

Advertisement

ಮೈಸೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಕೋರ್ ಕಮಿಟಿಯಲ್ಲಿ ಈ ಮೂವರ ಹೆಸರು ಅಂತಿಮ ಮಾಡಿ ತನ್ನ ಪಟ್ಟಿಯನ್ನ ಹೈಕಮಾಂಡ್ ಗೆ ಕಳುಹಿಸಿದೆ. ಇಂದು ಸಂಜೆ ವೇಳೆಗೆ ಅಧಿಕೃತ ಆದೇಶ ಬರಲಿದೆ ಎಂದರು.

ಕೋರ್ ಕಮಿಟಿ ಶಿಫಾರಸ್ಸು ಮಾಡಿದ ಮೂವರು ಒಂದೇ ಕೋಮಿನವರು ಎಂಬ ಪ್ರಶ್ನೆಗಳು ಈಗ ಇಲ್ಲ. ಈ‌ ಮೂವರು ರಾಜೀನಾಮೆ ಕೊಟ್ಟಿರುವುದಕ್ಕೆ ಸರ್ಕಾರ ಬಂದಿರುವುದು.ಸಿಎಂ ಕೊಟ್ಟ ಭರವಸೆಯೇನು ಎಂಬುದು ನಮಗು ಅವರಿಗು ಗೊತ್ತು ಎಂದರು.

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಚಿವರಾದ ಎಸ್.ಟಿ.ಸೋಮಶೇಖರ್, ಆನಂದ್ ಸಿಂಗ್ ಭೇಟಿ ನೀಡಿದರು. ನಾಡ ದೇವಿ ಚಾಮುಂಡೇಶ್ವರಿ ದರ್ಶನ ವಿಶೇಷ ಪೂಜೆ ಸಲ್ಲಿಸಿದರು. ನಂತರ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಲಕ್ಷ  ವೃಕ್ಷ ನೆಡುವ ಅಭಿಯಾನದ ಬಗ್ಗೆ ಚರ್ಚೆ ನಡೆಸಿದರು.

ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್.ನಾಗೇಂದ್ರ, ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಸೇರಿ ಮತ್ತಿತರರು ಭಾಗವಹಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next