Advertisement

ಸಶಕ್ತರಿಗೆ ಮೀಸಲಾತಿ ಬೇಡ: ಎಚ್‌. ವಿಶ್ವನಾಥ್‌

10:59 PM Mar 19, 2021 | Team Udayavani |

ಮೈಸೂರು: ಯಾವುದೇ ವರ್ಗದ ಆರ್ಥಿಕ ಶಕ್ತರಿಗೆ ಮೀಸಲಾತಿ ನೀಡುವ ಅಗತ್ಯವಿಲ್ಲ. ಬದಲಿಗೆ ಎಲ್ಲ ಸಮುದಾಯದ ಬಡವರಿಗೆ ಮೀಸಲಾತಿ ಅಗತ್ಯವಿದೆ ಎಂದು ವಿಧಾನ ಪರಿಷತ್ತಿನ ಸದಸ್ಯ ಎಚ್‌. ವಿಶ್ವನಾಥ್‌ ಹೇಳಿದರು.

Advertisement

ರಾಜ್ಯದಲ್ಲಿ ಮೀಸಲಾತಿಗಾಗಿ ಆಗ್ರಹಿಸಿ ವಿವಿಧ ಸಮುದಾಯಗಳ ಹೋರಾಟ ವಿಚಾರವಾಗಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಸಮುದಾಯದಲ್ಲಿ ಬಡವರಿದ್ದಾರೋ ಅವರಿಗಾಗಿ ಮೀಸಲಾತಿ ಹೋರಾಟ ಮಾಡುತ್ತಿದ್ದೇವೆ. ಕುರುಬ ಸಮುದಾಯದ ಬಡವರಿಗಾಗಿ ನಾನು ಹೋರಾಟ ಮಾಡುತ್ತಿದ್ದೇವೆ. ಈ ಸಂಬಂಧ ಶ್ರೀನಿವಾಸ ಪ್ರಸಾದ್‌ ಅವರು ನೋಡಿ ಮಾತನಾಡಬೇಕು ಎಂದರು.

ಇದನ್ನೂ ಓದಿ:ವಿಜಯಪುರ ಬಿಎಸ್ಎನ್ಎಲ್ ಕಚೇರಿ ಮೇಲೆ ಸಿಬಿಐ ದಾಳಿ

ಬಜೆಟ್‌ ಅಧಿವೇಶನದ ವಿಚಾರವಾಗಿ ಪ್ರತಿಕ್ರಿಯಿಸಿ, ಸದನದಲ್ಲಿ ಅರ್ಥಪೂರ್ಣ ಚರ್ಚೆ ನಡೆಯುತ್ತಿಲ್ಲ. ಯಾವ ಸುಖಕ್ಕಾಗಿ ಬಜೆಟ್‌ ಅಧಿವೇಶನ ನಡೆಸುತ್ತಿದ್ದಾರೋ ಗೊತ್ತಿಲ್ಲ. ಸದನ ಯಾಂತ್ರಿಕವಾಗಿ ನಡೆಯುತ್ತಿದೆ. ಸದನ ಮುಗಿದರೆ ಸಾಕು ಎನ್ನುವ ರೀತಿ ಸದನದ ಚರ್ಚೆ ನಡೆಯುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next