Advertisement
ಬೆಂಗಳೂರಿನ ಭಾರತೀಯ ತೋಟಗಾರಿಕೆ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿ, ಉತ್ತರ ಕನ್ನಡ ಜಿಲ್ಲೆ ಮಲೆನಾಡು ಪ್ರದೇಶವಾಗಿದ್ದು, ಹೆಚ್ಚಾಗಿ ಮಳೆ ಬೀಳುತ್ತಿರುವುದರಿಂದ ರೈತರ ಬೆಳೆಗಳು ರೋಗ ಹಾಗೂ ಕೀಟಗಳಿಂದ ಬಾಧಿತವಾಗುತ್ತಿದೆ. ಇದರಜೊತೆಯಾಗಿ ಪಾರಂಪರಿಕವಾಗಿ ತೋಟಗಾರಿಕಾ ಬೆಳೆಗಳೂ ಸಹ ನಶಿಸುತ್ತಿರುವುದರಿಂದ ಅವುಗಳ ಸಂರಕ್ಷಣೆ ಮತ್ತು ಹೊಸ ತೋಟಗಾರಿಕೆ ಬೆಳೆಗಳನ್ನು ನಮ್ಮ ರೈತ ಬಾಂಧವರಿಗೆ ಬೆಳೆಸಲು ಪ್ರೋತ್ಸಾಹಿಸುವುದು ಅಗತ್ಯವಿರುವುದರಿಂದ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ಹಾಗೂ ರಾಜ್ಯ ಸರ್ಕಾರದ ತೋಟಗಾರಿಕೆ ಇಲಾಖೆ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದ ಜೊತೆಗೂಡಿ ಪರಿಹಾರ ಕಂಡುಕೊಳ್ಳಬೇಕು ಎಂದು ಸೂಚಿಸಿದರು.
ವೈಜ್ಞಾನಿಕ ಗುಣಗಳ ಬಗ್ಗೆ ಅಧ್ಯಯನ ಮಾಡಬೇಕು. ಅದರಿಂದ ಈ ಭಾಗದ ರೈತರಿಗೆ ಹಿಚ್ಚಿನ ಪ್ರೋತ್ಸಾಹ
ನೀಡಿದಂತಾಗುತ್ತದೆ.
Related Articles
ಮತ್ತು ಇದರ ವೈಜ್ಞಾನಿಕ ಗುಣಗಳಿಂದ ಸಾಕಷ್ಟು ರೋಗಗಳನ್ನು ತಡೆಯುತ್ತದೆ ಎಂದು ಹೇಳುತ್ತಿರುವುದರಿಂದ ಈ ಬಗ್ಗೂ ಮಾಹಿತಿ ನೀಡಬೇಕು. ನಸಗುನಿ ಕಾಯಿ ಔಷಧ ಬಳ್ಳಿಯನ್ನು ಅಡಕೆ ಮರಗಳ ಮಧ್ಯೆ ಹೆಚ್ಚಾಗಿ ಬೆಳೆದು, ಈ ಬಳ್ಳಿಯ ಔಷ ಧ ಗುಣಗಳನ್ನು ಉಪಯೋಗ ಮಾಡುವ ಖಾಸಗಿ, ಸರ್ಕಾರಿ ಕಂಪನಿಗಳ ಜೊತೆ ಒಪ್ಪಂದದ ಬಗ್ಗೆ ಸೂಕ್ತ ಕ್ರಮ ವಹಿಸುವಂತಾಗಬೇಕು.
Advertisement
ಇದನ್ನೂ ಓದಿ:ಪಾಕ್ನ ಮೊಬೈಲ್ ಟವರ್ ಕುತಂತ್ರ: ಜಮ್ಮು ಕಾಶ್ಮೀರಕ್ಕೂ ಸಿಗ್ನಲ್ ಕಳುಹಿಸಲು ಯೋಜನೆ!
ಹಲಸು, ಬಾಳೆ ಬೆಳೆಯನ್ನು ನಮ್ಮ ಭಾಗದ ರೈತರು ಹೆಚ್ಚಾಗಿ ಬೆಳೆಯುತ್ತಾರೆ. ಆದ್ದರಿಂದ ಇವುಗಳಿಂದ ಹಪ್ಪಳ ತಯಾರಿಸುವ ಯಂತ್ರವನ್ನು ಕಂಡು ಹಿಡಿಯುವುದು ಸೂಕ್ತ ಎಂದೂ ಸಲಹೆ ನೀಡಿದ್ದಾರೆ. ಹಲಸು, ಅನಾನಸ್, ಬಾಳೆ ಹಣ್ಣುಗಳಕೊಯ್ಲೋತ್ತರ ನಿರ್ವಹಣೆ ತಾಂತ್ರಿಕತೆಗಳ ಬಗ್ಗೆ ಹೆಚ್ಚಿನ ಸಂಶೋಧನೆ ಮಾಡುವುದು ಅಗತ್ಯವಾಗಿದೆ. ನರ್ಸರಿಗಳನ್ನು ಮಾಡಲು ರೈತರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವಂತಾಗಬೇಕು ಎಂದು ಕಾಗೇರಿ ಸೂಚಿಸಿದ್ದಾರೆ.