Advertisement

ವಿಷನ್‌ 2050: ಶಿಕ್ಷಣ-ಕೃಷಿ ಸಮಿತಿ ಅಸ್ತಿತ್ವಕ್ಕೆ

08:01 PM Jun 15, 2021 | Team Udayavani |

ಕಲಬುರಗಿ: ಜಿಲ್ಲೆಯ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ “ಕಲಬುರಗಿ ವಿಷನ್‌-2050′ ಅನುಷ್ಠಾನಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಅವರು ಸೋಮವಾರ ಜಿಲ್ಲಾಧಿ ಕಾರಿ, ಹಿರಿಯ ಅಧಿಕಾರಿಗಳು, ತಜ್ಞರು ಮತ್ತು ನಿವೃತ್ತ ಅ ಧಿಕಾರಿಗಳೊಂದಿಗೆ ಮೊದಲ ಸಭೆ ನಡೆಸಿದರು. ಬೆಂಗಳೂರಿನಿಂದ ಜೂಮ್‌ ವಿಡಿಯೋ ಕಾನ್ಫ ರೆನ್ಸ್‌ ಮೂಲಕ ನಡೆದ ಸಭೆ ನಡೆಸಿದ ಸಚಿವರು, ಮುಂದಿನ 30 ವರ್ಷಗಳಲ್ಲಿ ಜಿಲ್ಲೆಯ ಒಟ್ಟಾರೆ ಅಭಿವೃದ್ಧಿಗೆ ವಿಷನ್‌ -2050′ ಸಹಕಾರಿಯಾಗಲಿದೆ. ಈಗಾಗಲೇ ಶಿಕ್ಷಣ, ಕೃಷಿ ಸೇರಿದಂತೆ ಇತರ ಸಮಿತಿ ಅಸ್ತಿತ್ವಕ್ಕೆ ಬಂದಿವೆ.

Advertisement

ದೀರ್ಘಾವ  ಧಿಯ ಅಭಿವೃದ್ಧಿ ಯೋಜನೆ ಅಗತ್ಯವಿಲ್ಲದ ಕ್ಷೇತ್ರಗಳಿಗೆ 10 ವರ್ಷಗಳ ಸಮಯವನ್ನು ನೀಡಲಾಗುವುದು ಎಂದರು. ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡ ನಿವೃತ್ತ ಹೆಚ್ಚುವರಿ ಮುಖ್ಯ ಕಾಯದರ್ಶಿ ವಿ.ಬಾಲಸುಬ್ರಹ್ಮಣಿಯನ್‌ ಜಿಲ್ಲೆಯ ಪ್ರಗತಿ ಸಂಬಂಧ ಸಲಹೆಗಳನ್ನು ನೀಡಿದರು. ಯಾವುದೇ ಜಿಲ್ಲೆ ಅಥವಾ ರಾಜ್ಯದ ಅಭಿವೃದ್ಧಿಗೆ ಕೃಷಿ, ಶಿಕ್ಷಣ ಮತ್ತು ಆರೋಗ್ಯ ಕಾರಣ. ಆದ್ದರಿಂದ ಈ ಕ್ಷೇತ್ರಗಳ ಬಗ್ಗೆ ಹೆಚ್ಚು ಗಮನಹರಿಸಬೇಕಿದೆ ಎಂದು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದರು. ಜಿಲ್ಲೆಯ ವಿಭಜನೆಯ ನಂತರ ಕಲಬುರಗಿ ನೀರಾವರಿ ಪ್ರಮಾಣ ಶೇ.11ಕ್ಕೆ ಇಳಿದಿದೆ.

ಇದು ಅಭಿವೃದ್ಧಿಯ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲ. ಒಂದು ವರ್ಷದಲ್ಲಿ ಜಿಲ್ಲೆಗೆ 30 ಇಂಚು ಮಳೆಯಾಗುವುದರಿಂದ ಅಂತರ್ಜಲ ಸಂರಕ್ಷಣೆ ಕ್ರಮ ವಹಿಸಬೇಕಿದೆ ಎಂದರು. ಜಿಲ್ಲೆಯು ಶ್ರೇಯಾಂಕದಲ್ಲಿ 45 ವರ್ಷಗಳ ಹಿಂದೆ ಯಾವ ಸ್ಥಾನದಲ್ಲಿತ್ತೋ, ಈಗಲೂ ಅದೇ ಸ್ಥಾನದಲ್ಲಿರುವುದು ಅತ್ಯಂತ ನೋವಿನ ಸಂಗತಿ. ಆಡಳಿತ ನಡೆಸಿದ ಸರ್ಕಾರಗಳು ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಾದ ಯೋಜನೆಗಳನ್ನು ಜಾರಿಮಾಡದೆ ಕೇವಲ ಗುತ್ತಿಗೆದಾರರ ಹಿತಕಾಪಾಡುವ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ಕೊಟ್ಟಿವೆ.

ಹೀಗಾಗಿ ಈ ಪ್ರದೇಶ ಹಿಂದುಳಿಯಲು ಪ್ರಮುಖ ಕಾರಣವಾಗಿದೆ ಎಂದು ಬಾಲಸುಬ್ರಹ್ಮಣಿಯನ್‌ ಅಸಮಾಧಾನ ಹೊರಹಾಕಿದರು. ರಾಜ್ಯ ಸರ್ಕಾರದ ಯೋಜನಾ ವಿಭಾಗದ ಮುಖ್ಯಸ್ಥರಾದ ಐಎಎಸ್‌ ಅಧಿ ಕಾರಿ ಶಾಲಿನಿ ರಜನೀಶ್‌, ಕೇಂದ್ರ ಸರ್ಕಾರದ ನೆರವಿನೊಂದಿಗೆ ಎಲ್ಲ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಕೌಶಲ್ಯ ಅಭಿವೃದ್ಧಿಗೆ ವಿದ್ಯಾರ್ಥಿಗಳು ಒಗ್ಗಿಕೊಳ್ಳಬೇಕು. ಇದರಿಂದ ನಾವು ಕಾರ್ಯಪಡೆಗಳನ್ನು ಸಿದ್ಧಪಡಿಸಬಹುದು. ಇದು ಆಧುನಿಕ ಪ್ರಪಂಚದ ಸವಾಲುಗಳನ್ನು ಎದುರಿಸಲು ಮತ್ತು ಸಾಮಾಜಿಕ ಮೂಲಸೌಕರ್ಯ ಸುಧಾರಿಸಲು ಅನುಕೂಲವಾಗಲಿದೆ ಎಂದರು.

ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸಾ° ಮಾತನಾಡಿ, ವಿಷನ್‌-2050 ಕುರಿತಂತೆ ಈಗಾಗಲೇ ಹಿರಿಯ ಅ ಧಿಕಾರಿಗಳೊಂದಿಗೆ ಪ್ರಾಥಮಿಕ ಸಭೆಗಳನ್ನು ನಡೆಸಲಾಗಿದೆ. ವಲಯವಾರು ಸಮಿತಿಗಳು ಮತ್ತು ಉಪಸಮಿತಿಗಳನ್ನೂ ರಚಿಸಲಾಗಿದೆ. ಅಲ್ಪಾವ ಧಿ, ಮಧ್ಯಮ ಅವ ಧಿ ಮತ್ತು ದೀರ್ಘ‌ಕಾಲೀನ ಗುರಿಗಳತ್ತ ಕೆಲಸ ಮಾಡುವ ಬಗ್ಗೆ ಅಧಿ ಕಾರಿಗಳಿಗೆ ತಿಳಿಸಲಾಗಿದೆ ಎಂದು ವಿವರಿಸಿದರು. ಜನಪ್ರತಿನಿ ಧಿಗಳೊಂದಿಗೆ ಸಂವಾದ: “ಕಲಬುರಗಿ ವಿಷನ್‌-2050′ ಕುರಿತ ಸಭೆ ನಂತರ ಸಚಿವ ಮುರುಗೇಶ ನಿರಾಣಿ, ಜಿಲ್ಲೆಯ ಜನಪ್ರತಿನಿ  ಧಿಗಳೊಂದಿಗೂ ಸಂವಾದ ನಡೆಸಿದರು.

Advertisement

ಸಂಸದ ಡಾ.ಉಮೇಶ್‌ ಜಾಧವ್‌ ಮಾತನಾಡಿ, ಬೆಣ್ಣೆತೋರಾ, ಮುಲ್ಲಾಮರಿ ಯೋಜನೆ ಸೇರಿದಂತೆ ಜಿಲ್ಲೆಯಲ್ಲಿ ಎಲ್ಲ ಸಂಪನ್ಮೂಲ ಇದ್ದರೂ, ಯಾವುದೇ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಣುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ಎರಡು ತಿಂಗಳಲ್ಲಿ “ವಿಷನ್‌-2050′ ಕ್ರಿಯಾಯೋಜನೆ ರೂಪಿಸುವ ಮೂಲಕ ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕೆಂದರು. ಕೆಕೆಆರ್‌ಡಿಬಿ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿ, ಡಾ.ನಂಜುಂಡಪ್ಪ ವರದಿ ಸೇರಿದಂತೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕುರಿತಾದ ಎಲ್ಲ ವರದಿಗಳನ್ನು ಮೊದಲು ಅಧ್ಯಯನ ಮಾಡಿ ಮಾಹಿತಿ ಕ್ರೂಢೀಕರಿಸಬೇಕು.

ನಂತರ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಹಣಕಾಸನ್ನು ವಿವಿಧ ಮೂಲಗಳಿಂದ ಸಂಗ್ರಹಿಸುವ ಬಗ್ಗೆ ಗಮನ ಹರಿಸಬೇಕು ಎಂದರು. ಚಿತ್ತಾಪುರ ಶಾಸಕ ಪ್ರಿಯಾಂಕ್‌ ಖರ್ಗೆ ಮಾತನಾಡಿ, ಈ ಭಾಗದ ಅಭ್ಯರ್ಥಿಗಳಿಗಾಗಿ ಐಎಎಸ್‌, ಕೆಎಎಸ್‌ ತರಬೇತಿಗಾಗಿ ವಿಶೇಷ ಘಟಕ ಪ್ರಾರಂಭಿಸಬೇಕು ಎಂದು ಸಲಹೆ ನೀಡಿದರು.

ಎನ್‌ಇಕೆಆರ್‌ಟಿಸಿ ಅಧ್ಯಕ್ಷ ರಾಜಕುಮಾರ್‌ ಪಾಟೀಲ್‌ ತೇಲ್ಕೂರ, ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು, ವಿಧಾನ ಪರಿಷತ್‌ ಸದಸ್ಯ ಶಶಿಲ್‌ ನಮೋಶಿ ತಮ್ಮ ಅಭಿಪ್ರಾಯ ಹಂಚಿಕೊಂಡರು. ಜಿಪಂ ಸಿಇಒ ಡಾ.ದಿಲೀಷ್‌ ಸಸಿ, ಮಹಾನಗರ ಪಾಲಿಕೆ ಆಯುಕ್ತ ಸುಧಾಕರ ಲೋಖಂಡೆ, ಜೆಸ್ಕಾಂ ಎಂಡಿ ರಾಹುಲ್‌ ಪಾಂಡ್ವೆ, ಎನ್‌ಇಕೆಆರ್‌ಟಿಸಿ ಎಂಡಿ ಕೂರ್ಮರಾವ, ನಗರ ಪೊಲೀಸ್‌ ಆಯುಕ್ತ ರವಿಕುಮಾರ, ಅಪರ ಜಿಲ್ಲಾಧಿಕಾರಿ ಶಂಕರ ವಣಿಕ್ಯಾಳ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next