Advertisement

ಪಿರಿಯಾಪಟ್ಟಣ: ದೃಷ್ಟಿ ವಿಶೇಷ ಚೇತನ ಯುವತಿ ಯುಪಿಎಸ್‍ಸಿಯಲ್ಲಿ 425 ನೇ ರ‍್ಯಾಂಕ್‌ ಸಾಧನೆ

02:33 PM May 31, 2022 | Team Udayavani |

ಪಿರಿಯಾಪಟ್ಟಣ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‍ಸಿ) ದೇಶದ ಅತ್ಯುನ್ನತ ನಾಗರಿಕ ಸೇವೆಗಳ ನೇಮಕಕ್ಕೆ ಪ್ರಸ್ತುತ ಸಾಲಿನಲ್ಲಿ ನಡೆಸಿದ ಪರೀಕ್ಷೆಯಲ್ಲಿ ತಾಲೂಕಿನ ಕುಡುಕೂರು ಗ್ರಾಮದ  ಕೆ.ಟಿ. ಮೇಘನಾ ಅವರು 425 ನೇ ರ‍್ಯಾಂಕ್‌ ಪಡೆದಿದ್ದಾರೆ.

Advertisement

ಪಿರಿಯಾಪಟ್ಟಣ ತಾಲೂಕಿನ ಕುಡುಕೂರು ಮೂಲದವರಾದ ಇವರು ಹಾಲಿ ಬೆಂಗಳೂರಿನ ಕೆಂಗೇರಿಯಲ್ಲಿ ವಾಸವಾಗಿದ್ದಾರೆ. ತಾಂಡವಮೂರ್ತಿ ಹಾಗೂ ನವನೀತ ದಂಪತಿ ಪುತ್ರಿ.

ಮೇಘನಾ ಅವರು ಪೂರ್ಣ ಪ್ರಮಾಣದಲ್ಲಿ ದೃಷ್ಟಿ ಸಮಸ್ಯೆ ಎದುರಿಸುತ್ತಿದ್ದಾರೆ. 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವೇಳೆ ರೆಟಿನಾ ಸಮಸ್ಯೆ ಎದುರಾಗಿ ಶೇ.70 ರಷ್ಟು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದರು. ಆದರೆ ತಮಗಿರುವ ಈ ವೈಕಲ್ಯವನ್ನು ಮೆಟ್ಟಿನಿಂತು ಯುಪಿಎಸ್ ‍ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಸಾಧನೆ ಮಾಡಿದ್ದಾರೆ.

2020 ನೇ ಸಾಲಿನಲ್ಲೂ ಮೇಘನ 465ನೇ ರ‍್ಯಾಂಕ್‌ ಪಡೆದಿದ್ದರು. ಶಾಲಾ ಕಾಲೇಜು ಶಿಕ್ಷಣವನ್ನು ಬೆಂಗಳೂರಿನಲ್ಲಿ ಮುಗಿಸಿದ್ದ ಮೇಘನಾ, 2015ನೇ ಬ್ಯಾಚ್ ನಲ್ಲಿ ಕೆಎಎಸ್ ಪರೀಕ್ಷೆಯಲ್ಲಿ 11ನೇ ರ‍್ಯಾಂಕ್‌ ಪಡೆದು ಪಾಸಾಗಿದ್ದರು. ಮಗಳ ಸಾಧನೆ ಬಗ್ಗೆ ಪೋಷಕರು, ಕುಟುಂಬಸ್ಥರು ಸೇರಿದಂತೆ ಪಿರಿಯಾಪಟ್ಟಣ ತಾಲೂಕಿನ ಜನತೆ ಸಂತಸ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next