Advertisement

ಅಶ್ರಫ್‌ ಕಲಾಯಿ ಮನೆಗೆ ಐವನ್‌ ಡಿ’ಸೋಜಾ ಭೇಟಿ

03:50 AM Jul 04, 2017 | Team Udayavani |

ಮಹಾನಗರ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಅಶ್ರಫ್‌ ಕಲಾಯಿ ಅವರ ಮನೆಗೆ ವಿಧಾನ ಪರಿಷತ್‌ ಮುಖ್ಯ ಸಚೇತಕ ಐವನ್‌ ಡಿ’ ಸೋಜಾ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. 

Advertisement

ಕೊಲೆಗಡುಕರನ್ನು ಮತ್ತು ಅವರಿಗೆ ಸಹಕಾರ ನೀಡಿದವರನ್ನು ಎಷ್ಟೇ ಪ್ರಭಾವಿಗಳಾದರೂ ಕಾನೂನಿನ ಕೈಯಿಂದ ತಪ್ಪಿಸಲು ಅವಕಾಶ ನೀಡುವುದಿಲ್ಲ. ಈಗಾಗಲೇ ಮುಖ್ಯಮಂತ್ರಿ ಮತ್ತು ಗೃಹ ಸಚಿವರನ್ನು ಭೇಟಿ ಮಾಡಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಅವರು ಈ ವೇಳೆ ತಿಳಿಸಿದರು.
ಮೃತ ಅಶ್ರಫ್‌ ಕುಟುಂಬಕ್ಕೆ ಪರಿಹಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಅವರು ಹೇಳಿದರು.

ದ.ಕ. ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ. ಅಶ್ರಫ್‌, ಮುಸ್ಲಿಂ ಸೆಂಟ್ರಲ್‌ ಕಮಿಟಿಯ ಸಿ. ಎಂ. ಮುಸ್ತಫಾ, ಹಾರಿಸ್‌ ಬೈಕಂಪಾಡಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next