Advertisement

ಕಡಲ್ಕೊರೆತ ಪ್ರದೇಶಕ್ಕೆ ಶಾಸಕ, ತಹಶೀಲ್ದಾರ್‌ ಭೇಟಿ

10:59 PM Jun 14, 2019 | Sriram |

ಕೋಟ: ಮಣೂರು-ಪಡುಕರೆ ಕಡಲಕಿನಾರೆಯ ಲಿಲ್ಲಿ ತೋಟದಲ್ಲಿ ಕಡಲ್ಕೊರೆತ ಸಮಸ್ಯೆ ತೀವ್ರಗೊಂಡಿದ್ದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ್‌ ಶೆಟ್ಟಿ ಹಾಗೂ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಅಭಿಯಂತರ ಡಯಾಸ್‌ ಭೇಟಿ ನೀಡಿ ಪರಿಶೀಲಿಸಿದರು.

Advertisement

ಶಾಸಕರಿಂದ ಪರಿಶೀಲನೆ
ಸಮಸ್ಯೆಯ ಕುರಿತು ಸ್ಥಳೀಯ ಗ್ರಾ.ಪಂ. ಸದಸ್ಯ ಭುಜಂಗ ಗುರಿಕಾರ ಅವರು ಶಾಸಕರ ಗಮನಕ್ಕೆ ತಂದಿದ್ದು, ಅದರಂತೆ ಶಾಸಕರು ಜೂ.12ರಂದು ಭೇಟಿ ನೀಡಿ ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಅನಂತರ ಜೂ.13ರಂದು ಸಣ್ಣ ನೀರಾವರಿ ಇಲಾಖೆಯ ಸಹಾಯಕ ಅಭಿಯಂತರರು, ತಹಶೀಲ್ದಾರರು ಭೇಟಿ ನೀಡಿ ಪರಿಶೀಲಿಸಿದರು ಹಾಗೂ ಸಮಸ್ಯೆ ಕುರಿತು ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಿ ಕ್ರಮಕೈಗೊಳ್ಳುವುದಾಗಿ ಈ ಸಂದರ್ಭ ಭರವಸೆ ನೀಡಿದರು.

ಬ್ರಹ್ಮಾವರ ತಹಶೀಲ್ದಾರ್‌ ಕಿರಣ್‌ ಬೋರಯ್ಯ, ಕೋಟ ನಾಡ ಕಚೇರಿಯ ಉಪತಹಶೀಲ್ದಾರ್‌ ಚಂದ್ರಹಾಸ್‌ ಬಂಗೇರ, ಗ್ರಾಮಲೆಕ್ಕಿಗ ಚೆಲುವರಾಜ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next