Advertisement

ದೇಸಾಯಿ ಕಲ್ಲೂರಿಗೆ ಅಬಕಾರಿ ಅಧಿಕಾರಿಗಳ ಭೇಟಿ: ಪರಿಶೀಲನೆ

02:20 PM Jul 11, 2022 | Team Udayavani |

ಅಫಜಲಪುರ: ತಾಲೂಕಿನ ದೇಸಾಯಿ ಕಲ್ಲೂರ ಗ್ರಾಮದಲ್ಲಿ ಕಿರಾಣಿ ಅಂಗಡಿಗಳಲ್ಲಿ ಸಾರಾಯಿ ಮಾರಾಟ ಮಾಡುತ್ತಿದ್ದಾರೆ ಎಂದು ಮಹಿಳೆಯರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿ ಬಸವರಾಜ ಭೇಟಿ ನೀಡಿ ಪರಿಶೀಲಿಸಿದರು.

Advertisement

ಈ ವೇಳೆ ಅಬಕಾರಿ ಅಧಿಕಾರಿಗಳು ಗ್ರಾಮಕ್ಕೆ ಬರುತ್ತಿದ್ದಂತೆ ಮಹಿಳೆಯರೆಲ್ಲ ಒಟ್ಟಾಗಿ ಬಂದು ಗ್ರಾಮದ ಕಿರಾಣಿ ಅಂಗಡಿಗಳಲ್ಲಿ ಸಾರಾಯಿ ಮಾರಾಟ ಮಾಡಲಾಗುತ್ತಿದೆ. ಇದರಿಂದ ನಮ್ಮ ಕುಟುಂಬಗಳು ಬೀದಿಗೆ ಬರುತ್ತಿವೆ. ಮಕ್ಕಳು ಹಾಳಾಗು ತ್ತಿದ್ದಾರೆ. ಇದನ್ನು ತಡೆಗಟ್ಟಬೇಕೆಂದು ಮನವಿ ಪತ್ರ ನೀಡಿದರು.

ಮನವಿ ಸ್ವೀಕರಿಸಿದ ಅಧಿಕಾರಿ ಆದಷ್ಟು ಬೇಗ ಇದಕ್ಕೆ ಕಡಿವಾಣ ಹಾಕುವುದಾಗಿ ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next