Advertisement

ಸೋಮವಾರದಿಂದ ಸಿದ್ದು ಸಂತ್ರಸ್ತರ ಭೇಟಿ

11:41 PM Aug 16, 2019 | Lakshmi GovindaRaj |

ಬೆಂಗಳೂರು: ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಸ್ವಕ್ಷೇತ್ರ ಬಾದಾಮಿ ಸೇರಿದಂತೆ ಬೆಳಗಾವಿ, ಧಾರವಾಡ, ಬಾಗಲಕೋಟೆ, ಗದಗ ಜಿಲ್ಲೆಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಸೋಮವಾರದಿಂದ ಒಂದು ವಾರ ಭೇಟಿ ನೀಡಿ, ಸಂಕಷ್ಟದಲ್ಲಿರುವ ಜನರ ಕಷ್ಟ ಆಲಿಸಲು ನಿರ್ಧರಿಸಿದ್ದಾರೆ.

Advertisement

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದರೂ, ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹದಲ್ಲಿ ಸಾಕಷ್ಟು ಜನರು ತೊಂದರೆ ಅನುಭವಿಸುತ್ತಿದ್ದರೂ, ಸ್ವಕ್ಷೇತ್ರ ಬಾದಾಮಿಗೂ ಅವರು ತೆರಳಿಲ್ಲ ಎಂದು ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಹೀಗಾಗಿ, ಈಗ ಒಂದು ವಾರಗಳ ಕಾಲ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ, ಜನರಿಗೆ ಸಾಂತ್ವನ ಹೇಳಲು ನಿರ್ಧರಿಸಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next