Advertisement

ಕಾರವಾರದವರೆಗೂ ವಿಸ್ಟಾಡೋಮ್‌ ರೈಲು ವಿಸ್ತರಣೆ

12:56 AM Aug 14, 2021 | Team Udayavani |

ಕುಂದಾಪುರ/ಉಡುಪಿ: ಕೋವಿಡ್‌ ಕಾರಣದಿಂದ ಭಾಗಶಃ ಸಂಚಾರ ಮೊಟಕುಗೊಳಿಸಿದ್ದ ಬೆಂಗಳೂರು-ಕಾರವಾರ (06211/12) ಬೆಳಗಿನ ರೈಲು, ಆ.16ರಿಂದ ಹೊಸ ವಿಸ್ಟಾಡೋಮ್‌ ಕೋಚಿ ನೊಂದಿಗೆ ಪುನರಾರಂಭಗೊಳ್ಳಲಿದೆ ಎಂದು ನೈಋತ್ಯ ರೈಲ್ವೇ ತಿಳಿಸಿದೆ.  ಇದಕ್ಕೆ ಕೊಂಕಣ್‌ ರೈಲ್ವೇ ಒಪ್ಪಿಗೆ ಸೂಚಿಸಿದ್ದು ರೈಲ್ವೇ ಹಿತರಕ್ಷಣ ಸಮಿತಿ, ಪ್ರಯಾಣಿಕರ ಒತ್ತಾಯ, ಹೋರಾಟ ಫ‌ಲಪ್ರದವಾಗಿದೆ.

Advertisement

ಕೊರೊನಾ ಕಾರಣದಿಂದ ಯಶವಂತಪುರ – ಕಾರವಾರ ಹಗಲು ರೈಲು ಸ್ಥಗಿತಗೊಂಡ ಬಳಿಕ ಅದೇ ಸಮಯದಲ್ಲಿ ವಿಸ್ಟಾಡೋಮ್‌ ಪ್ರವಾಸಿ ಬೋಗಿಯಿರುವ ರೈಲನ್ನು ಯಶವಂತಪುರದಿಂದ ಮಂಗಳೂರು ತನಕ ಓಡಿಸಲಾಗುತ್ತಿತ್ತು. ಇದರಿಂದ ಕುಂದಾಪುರ, ಕಾರವಾರ ಭಾಗದ ಪ್ರಯಾಣಿಕರು ಹಾಗೂ ಪ್ರವಾಸಿಗರಿಗೆ ನಿರಾಸೆಯಾಗಿತ್ತು.

ಈ ಸಂಬಂಧ ಕಾರವಾರದವರೆಗೂ ಈ ರೈಲನ್ನು  ವಿಸ್ತರಿಸಬೇಕೆಂದು ಕುಂದಾಪುರ, ಉತ್ತರ ಕನ್ನಡ ರೈಲ್ವೇ ಪ್ರಯಾಣಿಕರ ಹಿತರಕ್ಷಣ ಸಮಿತಿ, ಉತ್ತರ ಕನ್ನಡ ರೈಲ್ವೇ ಸಮಿತಿ, ರೈಲು ಪ್ರಯಾಣಿಕರು ಸಂಸದೆ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಮಾಡಿ ಒತ್ತಾಯಿಸಿದ್ದರು.

ಈ ನಿಟ್ಟಿನಲ್ಲಿ ತತ್‌ಕ್ಷಣ ಕಾರ್ಯ ಪ್ರವೃತ್ತರಾದ ಶೋಭಾ ಕರಂದ್ಲಾಜೆಯವರು, ಕೇಂದ್ರ ರೈಲ್ವೇ ಸಚಿವರನ್ನು ಭೇಟಿಯಾಗಿ ಕಾರವಾರ-ಬೆಂಗಳೂರು ಹಗಲು ರೈಲನ್ನು ಪುನರಾರಂಭಿಸುವಂತೆ ಮನವಿ ಮಾಡಿದರು. ಈ ಮನವಿಗೆ ಸಚಿವರು ಸ್ಪಂದಿಸಿ ವಿಸ್ಟಾಡೋಮ್‌ ಕೋಚ್‌ ಸಹಿತ ರೈಲು ಆರಂಭಿಸಲು ರೈಲ್ವೇ ಇಲಾಖೆಗೆ  ಸೂಚಿಸಿದರು. ಈ ಸಂಬಂಧ “ಉದಯವಾಣಿ’ಯು ಜು. 13ರಂದು ವರದಿ ಪ್ರಕಟಿಸಿ, ಗಮನ ಸೆಳೆದಿತ್ತು.

ಜನಪ್ರತಿನಿಧಿಗಳ ಸಹಕಾರ :

Advertisement

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಅನಂತ ಕುಮಾರ್‌ ಹೆಗಡೆ, ಶಾಸಕರಾದ ಕುಂದಾಪುರದ  ಹಾಲಾಡಿ ಶ್ರೀನಿವಾಸ ಶೆಟ್ಟಿ, ಕುಮಟಾದ ದಿನಕರ್‌ ಶೆಟ್ಟಿ ಅವರ ಸಹಕಾರ ಮತ್ತು ನಮ್ಮ ಹೋರಾಟದಿಂದ ವಿಸ್ಟಾಡೋಮ್‌ ರೈಲು ಕಾರವಾರದವರೆಗೆ ವಿಸ್ತರಿಸಲು ಸಾಧ್ಯವಾಗಿದೆ ಎಂದು ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗಣೇಶ್‌ ಪುತ್ರನ್‌ ತಿಳಿಸಿದ್ದಾರೆ.

ಆ.16ಕ್ಕೆ ರೈಲು ಆಗಮನ :

ವಿಸ್ಟಾಡೋಮ್‌ ರೈಲು ಉಡುಪಿ, ಕುಂದಾಪುರಕ್ಕೆ ಆ. 16ರಂದು ಬರಲಿದ್ದು, ಆ ದಿನ ಸಂಜೆ ಕುಂದಾಪುರದ ಮೂಡ್ಲಕಟ್ಟೆಯ ರೈಲು ನಿಲ್ದಾಣದಲ್ಲಿ ಸ್ವಾಗತ ಕಾರ್ಯಕ್ರಮವಿದೆ. ಉಡುಪಿ, ಕುಂದಾಪುರ, ಬೈಂದೂರು, ಕಾರವಾರದವರೆಗೆ ಅತ್ಯಾಧುನಿಕ ಸೌಲಭ್ಯಗಳಿರುವ ಈ ಬೋಗಿಗಳಲ್ಲಿ ಪ್ರಯಾಣಿಸಿದರೆ, ಪಂಚಗಂಗಾವಳಿ ನದಿ, ಗೋಕರ್ಣ, ಮುಡೇìಶ್ವರ, ಕಡಲ ಕಿನಾರೆ, ಒತ್ತಿನೆಣೆ ಗುಡ್ಡ ಸಹಿತ ಇನ್ನಿತರ ಸಹಜ ಸೌಂದರ್ಯದ ಪ್ರಾಕೃತಿಕ ಸೊಬಗನ್ನು ಸವಿಯುವ ಅವಕಾಶ ಪ್ರಯಾಣಿಕರಿಗೆ ಸಿಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next