Advertisement

ಜಿಲ್ಲಾ ಘಟಕಗಳ ಜತೆ ವಿಶ್ವನಾಥ್‌ ಸಮಾಲೋಚನೆ

07:00 AM Oct 06, 2018 | Team Udayavani |

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಘಟಕಗಳ ಜತೆ ಸಮಾಲೋಚನೆಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.
ವಿಶ್ವನಾಥ್‌ ಮುಂದಾಗಿದ್ದಾರೆ.

Advertisement

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡು ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿರುವುದರಿಂದ ಯಾವ ಕ್ಷೇತ್ರದಲ್ಲಿ ಪಕ್ಷದ ಶಕ್ತಿ ಎಷ್ಟಿದೆ. ಗೆಲ್ಲುವ ಸಾಧ್ಯತೆ ಕುರಿತು ಜಿಲ್ಲಾ ಮುಖಂಡರ ಜತೆ ಚರ್ಚಿಸಿ ಮಾಹಿತಿ ಪಡೆಯುವುದು ಇದರ ಉದ್ದೇಶ ಎಂದು ಹೇಳಲಾಗಿದೆ.

ಮೂಲಗಳ ಪ್ರಕಾರ 28 ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟು ಕೊಡುವ ಸಾಧ್ಯತೆಯಿದೆ. ಮಂಡ್ಯ, ಮೈಸೂರು,
ಹಾಸನ, ಶಿವಮೊಗ್ಗ, ಕಾರವಾರ, ವಿಜಯಪುರ, ಬಾಗಲಕೋಟೆ, ಬೀದರ್‌ ಕ್ಷೇತ್ರಕ್ಕೆ ಜೆಡಿಎಸ್‌ ಬೇಡಿಕೆ ಇಡಬಹುದು ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next