Advertisement

ಸಿದ್ದು ಬಗ್ಗೆ ವಿಶ್ವನಾಥ್‌ಗೆ ಅಸೂಯೆ: ಡಿಸೋಜಾ

01:50 AM Jul 05, 2019 | Sriram |
ರಾಯಚೂರು: ಸಿದ್ದರಾಮಯ್ಯ ಅವರನ್ನು ಕಂಡರೆ ಎಚ್.ವಿಶ್ವನಾಥಗೆ ಅಸೂಯೆ ಇದೆ. ಅದೇ ಕಾರಣಕ್ಕೆ ಮೊದಲಿನಿಂದಲೂ ಅವರ ಬಗ್ಗೆ ಟೀಕೆ ಮಾಡುತ್ತಲೇ ಇದ್ದಾರೆ ಎಂದು ಸಿಎಂ ಸಂಸದೀಯ ಕಾರ್ಯದರ್ಶಿ ಐವನ್‌ ಡಿಸೋಜಾ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಸಿದ್ದರಾಮಯ್ಯರಿಂದ ಅಸ್ಥಿರವಾಗಿಲ್ಲ. ಸರ್ಕಾರ ಅಸ್ತಿತ್ವಕ್ಕೆ ಬರಲು ಸಿದ್ದರಾಮಯ್ಯನವರೇ ಕಾರಣ, ಅವರಿಂದಾಗಿಯೇ ಸರ್ಕಾರ ಸ್ಥಿರವಾಗಿ ಮುನ್ನಡೆ ಯುತ್ತಿದೆ. ಸಮನ್ವಯ ಸಮಿತಿಯಲ್ಲಿ ಜೆಡಿಎಸ್‌ನವರೂ ಇದ್ದಾರೆ ಎಂದರು. ಶಾಸಕ ಆನಂದಸಿಂಗ್‌ ಅವರ ರಾಜೀನಾಮೆಗೆ ವೈಯಕ್ತಿಕ ಕಾರಣವಿದೆ. ಅವರು ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ. ಇದರಿಂದ ರಾಜೀನಾಮೆ ಸ್ವೀಕೃತವಾಗುವುದಿಲ್ಲ. ಅವರ ಬೇಡಿಕೆಗಳನ್ನು ಪರಿಶೀಲಿಸುವ ಭರವಸೆ ನೀಡಲಾಗಿದೆ. ರಮೇಶ ಜಾರಕಿಹೊಳಿ ಮೊದಲಿನಿಂದಲೂ ದೂರವಿದ್ದಾರೆ. ಈಗ ಹೊಸ ನಾಟಕ ಆರಂಭಿಸಿದ್ದಾರೆ ಎಂದರು. ಜಿ.ಟಿ.ದೇವೇಗೌಡರು ಬಿಜೆಪಿ ಪರ ಮಾತನಾಡುತ್ತಾರೆ ಎನ್ನುವುದು ಅವರ ಅಭಿಪ್ರಾಯ ಎಂದರು
Advertisement

Udayavani is now on Telegram. Click here to join our channel and stay updated with the latest news.

Next