Advertisement

ಮಾಣಿ: ಬಸ್, ಲಾರಿ, ಕಾರು ನಡುವೆ ಸರಣಿ ಅಪಘಾತ

10:45 AM Apr 19, 2022 | Team Udayavani |

ವಿಟ್ಲ: ಕಾರು, ಬಸ್ ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ವಿಟ್ಲದಿಂದ ಸುಮಾರು 15 ಕಿಮೀ ದೂರದಲ್ಲಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ.

Advertisement

ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಮುಂಭಾಗದಲ್ಲಿ ತೆರಳುತ್ತಿದ್ದ ಲಾರಿಗೆ ಢಿಕ್ಕಿಯಾಗಿ ಕಾರಿಗೂ ಢಿಕ್ಕಿ ಹೊಡೆದು ರಸ್ತೆ ಮಧ್ಯದಲ್ಲಿ ನಿಂತಿದೆ. ಘಟನೆಯಲ್ಲಿ ಬಸ್ಸಿಗೆ ಮತ್ತು ಲಾರಿಗೆ ಹಾನಿಯಾಗಿದೆ.

ಇದನ್ನೂ ಓದಿ:ಹಳೇ ಹುಬ್ಬಳ್ಳಿ ಘಟನೆ; 12 ಪ್ರಕರಣ ದಾಖಲು

ಘಟನೆಯಿಂದ ಹೆದ್ದಾರಿ ಸಂಪೂರ್ಣವಾಗಿ ಅಸ್ಥವ್ಯಸ್ಥವಾಗಿ, ಹೆದ್ದಾರಿಯೂದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿತ್ತು. ‌ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next