Advertisement

Vitla: ಕಾಲು ಜಾರಿ ಕೆರೆಗೆ ಬಿದ್ದು ಸಾವು

11:12 PM Jan 18, 2024 | Team Udayavani |

ವಿಟ್ಲ: ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕೊಳ್ನಾಡು ಗ್ರಾಮದ ಮಂಕುಡೆ ಎಂಬಲ್ಲಿ ನಡೆದಿದೆ.

Advertisement

ಮಂಕುಡೆ ನಿವಾಸಿ ಕೇಶವ ದೇವಾಡಿಗ ಅವರ ಪುತ್ರ ರವೀಂದ್ರ ದೇವಾಡಿಗ (32) ಮೃತಪಟ್ಟವರು. ಕೂಲಿ ಕೆಲಸ ಮಾಡುತ್ತಿದ್ದ ಅವರು ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಪಾಳು ಬಿದ್ದ ಕೆರೆಗೆ ಕಾಲು ಜಾರಿ ಬಿದ್ದಿದ್ದಾರೆ. ಘಟನ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next