Advertisement

ಪ್ರವೀಣ್ ನೆಟ್ಟಾರು ಹತ್ಯೆ: ವಿಟ್ಲ ಪೇಟೆ ಸಂಪೂರ್ಣ ಬಂದ್

02:58 PM Jul 27, 2022 | Team Udayavani |

ವಿಟ್ಲ:  ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು  ಹತ್ಯೆಗೈದ ಹಿನ್ನೆಲೆ ಸಂಘ ಪರಿವಾರ ಹಾಗೂ ಬಿಜೆಪಿ ಕಾರ್ಯಕರ್ತರು ವಿಟ್ಲ ಪೇಟೆಯಲ್ಲಿನ ಅಂಗಡಿಗಳಿಗೆ ತೆರಳಿ ಅಂಗಡಿಗಳನ್ನು ಮುಚ್ಚುವಂತೆ ಮನವಿ ಮಾಡಿದರು. ಅದರಂತೆ ವಿಟ್ಲಪೇಟೆಯ ಅಂಗಡಿಗಳು ಸಂಪೂರ್ಣವಾಗಿ ಬಂದ್ ಆಗಿದೆ.

Advertisement

ಸರಕಾರಿ ಹಾಗೂ ಕೆಲವು ಖಾಸಗಿ ಶಾಲೆಗಳಿಗೆ ರಜೆ ನೀಡಲಾಗಿದೆ. ಶಾಲಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಲವು ಬಸ್ ಗಳು ಮಾತ್ರ ಸಂಚಾರ ಮಾಡುತ್ತಿದೆ.

ಎಲ್ಲಾ ಅಂಗಡಿಗಳು ಕೂಡಾ ಬಂದ್ ಆಗಿದೆ. ಇನ್ನೂ ಅಗತ್ಯ ವಸ್ತುಗಳಾದ ಮೆಡಿಕಲ್ ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ. ಪೇಟೆಯಲ್ಲಿ ಜನಸಂಚಾರ ಕಡಿಮೆಯಾಗಿದೆ. ಆಟೋ ರಿಕ್ಷಾ, ಕಾರು ಸಂಚಾರ ಸ್ಥಗಿತಗೊಳಿಸಿದೆ.

ವಿಟ್ಲ ಪೊಲೀಸರು ಬಿಗಿ ಬಂದೋ ಬಸ್ತ್ ಏರ್ಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next