Advertisement

Vitla: ಸಿಡಿಲು ಬಡಿದು ಮನೆಗೆ ಹಾನಿ; ಮನೆಮಂದಿ ಅದೃಷ್ಟವಶಾತ್ ಪಾರು

09:58 AM Jul 19, 2024 | Team Udayavani |

ವಿಟ್ಲ: ಸಿಡಿಲು ಬಡಿದು ಮನೆಗೆ ಹಾನಿಯುಂಟಾದ ಘಟನೆ ವಿಟ್ಲ ಸಮೀಪದ ಕೇಪು ಗ್ರಾಮದ ಚೆಲ್ಲಡ್ಕ ದಲ್ಲಿ ನಡೆದಿದೆ.

Advertisement

ಚೆಲ್ಲಡ್ಕ ಶಶಿಶೇಖರ ಭಂಡಾರಿ ಎಂಬವರ ಮನೆಗೆ ಜು.18ರ ಗುರುವಾರ ರಾತ್ರಿ  ಸಿಡಿಲು ಬಡಿದು ಮನೆಯೊಳಗಿದ್ದ ಫ್ರಿಡ್ಜ್, ಗ್ರೈಂಡರ್ ಹಾಗೂ ಇತರ ಎಲೆಕ್ಟ್ರಾನಿಕ್ ಉಪಕರಣಗಳಿಗೆ ಬೆಂಕಿ ಹೊತ್ತಿ ಸುಟ್ಟು ಹೋಗಿದೆ.

ಬೆಂಕಿಯ ತೀವ್ರತೆ ಹೆಚ್ಚಾಗಿ ಮನೆಯ ಒಂದು ಬದಿಗೆ ಬೆಂಕಿ ತಗುಲಿ ಉರಿದಿದ್ದು, ಸ್ಥಳೀಯ ಯುವಕರು ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಅಗ್ನಿಶಾಮಕದಳದವರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದರು.

ಘಟನೆಯಿಂದಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ್ದು, ಮನೆಯೊಳಗಿದ್ದ ಶಶಿಶೇಖರ ಭಂಡಾರಿ, ಪತ್ನಿ, ಇಬ್ಬರು ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement

ಘಟನಾ ಸ್ಥಳಕ್ಕೆ ಪಿಡಿಓ ಗೋಕುಲದಾಸ್ ಭಕ್ತ, ಪಂಚಾಯತ್ ಅಧ್ಯಕ್ಷ ರಾಘವ ಸಾರಡ್ಕ, ವಿಎ, ಪಂಚಾಯತ್ ಸದಸ್ಯರಾದ ಜಗಜ್ಜೀವನ್ ರಾಮ್ ಶೆಟ್ಟಿ ಮೈರ, ಪುರುಷೋತ್ತಮ ಕಲ್ಲಂಗಳ, ಬಿಜೆಪಿ ಮುಖಂಡರಾದ ರಾಜೀವ ಭಂಡಾರಿ ಕುಂಡಕೋಳಿ, ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ವಿಎ ಆಫೀಸ್ ನ ಗಣೇಶ್ ಪ್ರಭು, ಗ್ರಾಮ ಪಂಚಾಯತ್ ಸಹಾಯಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next