Advertisement

Vitla: ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ

12:36 AM Oct 08, 2024 | Team Udayavani |

ವಿಟ್ಲ: ವಿಟ್ಲ ಸಮೀಪದ ಕಳೆಂಜಿಮಲೆ ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿ ವಸ್ತು ಸಹಿತ ನಾಲ್ಕು ಮಂದಿಯನ್ನು ಚಂದಳಿಕೆಯಲ್ಲಿ ಬಂಧಿಸಿದ್ದಾರೆ.

Advertisement

ಕೆದಿಲ ನಿವಾಸಿಗಳಾದ ಅಲಿ ಹೈದರ್‌, ಉಮ್ಮರ್‌ ಫಾರೂಕ್‌, ಮಹಮ್ಮದ್‌ ಹಸೈನಾರ್‌, ಉಮ್ಮರ್‌ ಫಾರೂಕ್‌ ಅವರನ್ನು ಬಂಧಿಸಲಾಗಿದೆ. ಆರೋಪಿಗಳು ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಕೃತ್ಯ ನಡೆಸುತ್ತಿದ್ದರು ಎನ್ನಲಾಗಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. 11 ಕೆ.ಜಿ. ಹಾಲುಮಡ್ಡಿ, ಮೇಣ ತೆಗೆಯಲು ಬಳಸಿದ ಸಲಕರಣೆ, ರಿಕ್ಷಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವಲಯ ಅರಣ್ಯಾಧಿಕಾರಿ ಕಿರಣ್‌ ನೇತೃತ್ವದಲ್ಲಿ ಉಪ ವಲಯಾರಣ್ಯಾಧಿಕಾರಿ ವೀರಣ್ಣ, ಪ್ರಕಾಶ್‌ ಬಿ.ಟಿ., ಗಿರೀಶ್‌ ಎಚ್‌.ಪಿ., ಗಸ್ತು ಅರಣ್ಯಪಾಲಕ ಸತೀಶ್‌ ಡಿ’ಸೋಜಾ, ಚಾಲಕರಾದ ರಾಜೇಶ್‌, ತೇಜಪ್ರಕಾಶ್‌ ಹಾಗೂ ಸಿಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next