Advertisement

ವಿಟ್ಲ: ಕಬ್ಬಿಣ ರಾಡ್ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿ; ಚಾಲಕನಿಗೆ ಗಾಯ

11:16 AM Mar 12, 2021 | Team Udayavani |

ವಿಟ್ಲ: ಮಂಗಳೂರು ಬೆಂಗಳೂರು  ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು  ರಸ್ತೆಗೆ ಉರುಳಿದ ಪರಿಣಾಮ ಚಾಲಕ ಗಾಯಗೊಂಡ ಘಟನೆ ನಡೆದಿದೆ.

Advertisement

ಬೆಂಗಳೂರಿನಿಂದ ಮಂಗಳೂರಿಗೆ ಕಬ್ಬಿಣದ ರಾಡ್ ಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಮಗುಚಿ ಬಿದ್ದಿದೆ.

ಚಾಲಕ ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕಬ್ಬಿಣದ ರಾಡ್ ಗಳು ರಸ್ತೆಗೆ ಚೆಲ್ಲಾಪಿಲ್ಲಿಯಾಗಿ ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಇದನ್ನೂ ಓದಿ: ತೆಕ್ಕಟ್ಟೆ: ಮಹಾಶಿವರಾತ್ರಿಯಂದು ಸಂಭ್ರಮದ ಹಣಬಿನ ಹಬ್ಬ

ಇದನ್ನೂ ಓದಿ: ಬೆಳ್ತಂಗಡಿ: ರಾ.ಹೆ 73ರ ಸಮೀಪದ ಅರಣ್ಯದಲ್ಲಿ 6 ಮಂಗಗಳ ಮೃತದೇಹ ಪತ್ತೆ, ಆತಂಕ ಸೃಷ್ಟಿ

Advertisement
Advertisement

Udayavani is now on Telegram. Click here to join our channel and stay updated with the latest news.

Next