Advertisement

ವಿಟ್ಲ: ಮಲಗಿದಲ್ಲಿಯೇ ವ್ಯಕ್ತಿ ಸಾವು…ಪೊಲೀಸರಿಂದ ತನಿಖೆ

11:05 PM Feb 26, 2023 | Team Udayavani |

ವಿಟ್ಲ: ಕೋಣೆಯಲ್ಲಿ ಮಲಗಿದ ವ್ಯಕ್ತಿ ಬೆಳಗ್ಗೆ ಏಳದಿರುವುದನ್ನು ಗಮನಿಸಿ ಆಸ್ಪತ್ರೆಗೆ ಕರೆದು ತಂದ ಸಂದರ್ಭ ಮೃತಪಟ್ಟಿರುವುದು ದೃಢಪಟ್ಟಿದ್ದು, ಮೃತದೇಹವನ್ನು ಗಮನಿಸಿದ ಸಾರ್ವಜನಿಕರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸರು ವಿಶೇಷ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

Advertisement

ಇಡ್ಕಿದು ಕುಮೇರು ನಿವಾಸಿ ಅರವಿಂದ ಭಾಸ್ಕರ (39) ಮೃತ ವ್ಯಕ್ತಿ. ಫೆ.25ರಂದು ರಾತ್ರಿ 10ರಿಂದ ಫೆ.26ರ ಬೆಳಗ್ಗೆ 7.30ರ ಮಧ್ಯದ ಸಮಯದಲ್ಲಿ ಇಡ್ಕಿದು ಗ್ರಾಮದ ಅರ್ಕೆಚ್ಚಾರು ಕುಮೇರು ಎಂಬಲ್ಲಿ ವಾಸದ ಮನೆಯ ಕೋಣೆಯಲ್ಲಿ ಮಲಗಿದ್ದಲ್ಲಿಯೇ ಇದ್ದುದನ್ನು ಗಮನಿಸಿದ ಪತ್ನಿ, ಪತ್ನಿಯ ತಂದೆ ಹಾಗೂ ಕೆಲವು ವ್ಯಕ್ತಿಗಳು ಸೇರಿಕೊಂಡು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ತೆಗೆದುಕೊಂಡು ಬಂದ್ದಿದ್ದು, ವೈದ್ಯರು ಮೃತಪಟ್ಟ ಬಗ್ಗೆ ಧೃಢಪಡಿಸಿದ್ದಾರೆ. ಈ ಬಗ್ಗೆ ಪತ್ನಿ ಆಶಾ ಅವರು ಅರವಿಂದ್‌ ಗೆಳೆಯ ಮನೋಜ್‌ಗೆ ತಿಳಿಸಿದ್ದು, ಅವರು ಬಂದು ಮೃತ ದೇಹ ನೋಡಿ, ಸಂಶಯ ವ್ಯಕ್ತಪಡಿಸಿ ದೂರು ನೀಡಿದ್ದರಿಂದ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಡಿಯುವ ವಿಚಾರ ಬಿಟ್ಟರೆ ಆರೋಗ್ಯವಾಗಿದ್ದ ವ್ಯಕ್ತಿ ಏಕಾಏಕಿ ಮಲಗಿದಲ್ಲಿಯೇ ಸತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ. ಮನೆಗೆ ವ್ಯಕ್ತಿಯೊಬ್ಬ ಬಂದು ಹೋಗುತ್ತಿದ್ದ ಎನ್ನುವ ವಿಚಾರ ಕೆಲವು ಅನುಮಾನವನ್ನು ಮೂಡಿಸಿದ್ದು, ಈ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ತನಿಖೆ ಆರಂಭಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next