Advertisement

Punacha : ಕಾಲು ಜಾರಿ ಚರಂಡಿಗೆ ಬಿದ್ದು ವ್ಯಕ್ತಿ ಸಾವು

01:20 PM Jul 09, 2023 | Team Udayavani |

ವಿಟ್ಲ: ವ್ಯಕ್ತಿಯೊಬ್ಬರು ಕಾಲು ಸಂಕ ದಾಟುವಾಗ ಆಕಸ್ಮಿಕವಾಗಿ ಕಾಲು ಜಾರಿ ಚರಂಡಿಗೆ  ಬಿದ್ದು ಮೃತಪಟ್ಟ ಘಟನೆ ಪುಣಚ ಗ್ರಾಮದ ಪರಿಯಾಲ್ತಡ್ಕ ಎಂಬಲ್ಲಿ ನಡೆದಿದೆ.‌

Advertisement

ಪುಣಚ ಗ್ರಾಮದ ಮಾಯಿಲ ಮೂಲೆ ನಿವಾಸಿ ಕೇಶವ ನಾಯ್ಕ ಎಂ (51) ಮೃತಪಟ್ಟವರು.‌

ಕೇಶವ ನಾಯ್ಕ ಅವರು ಪುಣಚ ಗ್ರಾಮದ ಪರಿಯಾಲ್ತಡ್ಕದಲ್ಲಿರುವ ತನ್ನ ಬಾಡಿಗೆ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಮನೆಯ ಬಳಿಯಿರುವ ಚಿಕ್ಕಚರಂಡಿಗೆ ಕಾಲುಸಂಕ ದಾಟುತ್ತಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಕವುಚಿ ಬಿದ್ದು ಮೇಲೆ ಏಳಲು ಆಗದೇ ಮೃತಪಟ್ಟಿದ್ದಾರೆ.

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Advertisement

Udayavani is now on Telegram. Click here to join our channel and stay updated with the latest news.

Next