Advertisement

ವಿಟ್ಲ: ಬಸ್ಸಿನಿಂದ ರಸ್ತೆಗೆ ಎಸೆಯಲ್ಪಟ್ಟು ಪ್ರಯಾಣಿಕ ಗಂಭೀರ

02:16 PM Sep 16, 2022 | Team Udayavani |

ವಿಟ್ಲ: ಪೆರುವಾಯಿ ಗ್ರಾಮದ ಕೆದುವಾರು ಎಂಬಲ್ಲಿ ಕೆಎಸ್ ಆರ್ ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಪ್ರಯಾಣಿಕನೋರ್ವ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.

Advertisement

ಕೆದುವಾರು ನಿವಾಸಿ ಇನಾಸ್ ಡಿ ಸೋಜಾ ಗಾಯಗೊಂಡವರು.

ಇದನ್ನೂ ಓದಿ:ನಾಯಿ ಸಾಕುವ ವಿಷಯಕ್ಕೆ ಜಗಳ: ಪುತ್ರಿ ಕೊಂದು ತಾಯಿ ಆತ್ಮಹತ್ಯೆ

ಇನಾಸ್‌ ಅವರು ಸೆ.15ರಂದು ವಿಟ್ಲ ಪೇಟೆಯಿಂದ ಕೆಲಸ ಮುಗಿಸಿ ವಿಟ್ಲ ಪಕಳಕುಂಜ ಕೆ ಎಸ್ ಆರ್ ಟಿ ಸಿ  ಬಸ್‌ನಲ್ಲಿ ಕೆದುವಾರು ಎಂಬಲ್ಲಿಗೆ ತಲುಪುವ ವೇಳೆ ಬಸ್ ಸ್ಟಾಪ್ ನಲ್ಲಿ ಇಳಿಯಲು ಎದ್ದು ನಿಂತಿದ್ದಾರೆ. ಈ ವೇಳೆ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನು ತಿರುವು ರಸ್ತೆಯಲ್ಲಿ ಒಮ್ಮೆಲೇ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಬಸ್ಸನ್ನು ಚಲಾಯಿಸಿದ್ದಾನೆ.

ಬಸ್ಸಿನ ಹಿಂಬದಿಯ ಬಾಗಿಲು ಬಳಿ ನಿಂತಿದ್ದ ಇನಾಸ್ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ರಸ್ತೆಗೆ ಬಿದ್ದ  ಪರಿಣಾಮ ಗಂಭೀರ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next