Advertisement

ಫೇಸ್‌ಬುಕ್‌ನಲ್ಲಿ  ವಿವಿಪ್ಯಾಟ್‌ ಪ್ರಾತ್ಯಕ್ಷಿಕೆ ನೇರ ಪ್ರಸಾರ 

04:21 PM Apr 26, 2018 | Team Udayavani |

ಧಾರವಾಡ: ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾರರ ಜಾಗೃತಿಗಾಗಿ ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಮತ್ತು ಸಹಭಾಗಿತ್ವ (ಸ್ವೀಪ್‌) ಸಮಿತಿಯು ಫೇಸ್‌ಬುಕ್‌ ನೇರ ಪ್ರಸಾರದ ಮೂಲಕ ಇವಿಎಂ ಹಾಗೂ ವಿವಿಪ್ಯಾಟ್‌ ಮತಯಂತ್ರಗಳ ಬಳಕೆ ಕುರಿತು ಪ್ರಾತ್ಯಕ್ಷಿಕೆ ನೀಡುವ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಪಂ ಸಭಾಂಗಣದಲ್ಲಿ ಬೆಳಿಗ್ಗೆ 11:00ಗಂಟೆಯಿಂದ ಆರಂಭವಾದ ನೇರ ಪ್ರಾತ್ಯಕ್ಷಿಕೆಯಲ್ಲಿ ಜಿಲ್ಲಾ ಧಿಕಾರಿ ಡಾ| ಎಸ್‌.ಬಿ. ಬೊಮ್ಮನಹಳ್ಳಿ ಹಾಗೂ ಜಿಪಂ ಸಿಇಒ ಸ್ನೇಹಲ್‌ ಆರ್‌. ಅವರು, ಮತದಾರರ ಖಾತ್ರಿಯಂತ್ರದ ಬಳಕೆ ಮತ್ತು ಅದರ ಮಹತ್ವವನ್ನು ನೇರ ಪ್ರಸಾರದಲ್ಲಿ ವಿವರಿಸಿದರು.

Advertisement

ಮಾಧ್ಯಮ ಪ್ರತಿನಿಧಿಗಳು, ಮಹಿಳೆಯರು ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿ ಖುದ್ದಾಗಿ ಅಣಕು ಮತದಾನ ಮಾಡುವ ಮೂಲಕ ಮಾಹಿತಿ ಪಡೆದರು. ಇದೇ ಮೊದಲ ಬಾರಿಗೆ ವಿವಿಪ್ಯಾಟ್‌ ಮೂಲಕ ನಾವು ಹಾಕಿದ ಮತ ನಿರ್ದಿಷ್ಟ ಅಭ್ಯರ್ಥಿ/ಪಕ್ಷಕ್ಕೆ ದಾಖಲಾಗಿದೆಯೇ ಎಂಬುದನ್ನು ತಿಳಿಯಲು ಅನುಕೂಲ ಕಲ್ಪಿಸಿರುವುದು ಸ್ವಾಗತಾರ್ಹವಾಗಿದೆ ಎಂದು ಮತ ಚಲಾಯಿಸಿದ ಜನರು ಅಭಿಪ್ರಾಯ ವ್ಯಕ್ತಪಡಿಸಿದರು. ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನವೀನ ಶಿಂತ್ರೆ ಸೇರಿದಂತೆ ವಿವಿಧ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next