Advertisement

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಸಲಹೆಗಾರ ವಿಕೆ ಜೈನ್ ರಾಜೀನಾಮೆ

04:38 PM Mar 13, 2018 | Sharanya Alva |

ನವದೆಹಲಿ: ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆ ನಡೆಸಿದ ಬೆನ್ನಲ್ಲೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲಹೆಗಾರ ವಿಕೆ ಜೈನ್ ವೈಯಕ್ತಿಕ ಕಾರಣ ನೀಡಿ ಮಂಗಳವಾರ ರಾಜೀನಾಮೆ ಕೊಟ್ಟಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

Advertisement

ಕೌಟುಂಬಿಕ ಹಾಗೂ ವೈಯಕ್ತಿಕ ಕಾರಣ ನೀಡಿ ಜೈನ್ ಅವರು ದೆಹಲಿ ಮುಖ್ಯಮಂತ್ರಿ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಮೂಲಗಳು ಹೇಳಿವೆ. ಜೈನ್ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಕಚೇರಿಗೆ ಹಾಗೂ ಒಂದು ಪ್ರತಿಯನ್ನು ಲೆಫ್ಟಿನೆಂಟ್ ಗವರ್ನರ್ ಗೆ ಕಳುಹಿಸಿರುವುದಾಗಿ ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next