Advertisement

ಆಟವಾಡುತ್ತಲೇ ಕೊನೆಯುಸಿರೆಳೆದ ರಾಜ್ಯಮಟ್ಟದ ವಾಲಿಬಾಲ್ ಪಟು!

10:53 AM Mar 28, 2021 | Team Udayavani |

ಕಾಪು: ರಾಜ್ಯ ಮಟ್ಟದ ವಾಲಿಬಾಲ್ ಆಟಗಾರನೋರ್ವ ಆಟವಾಡುತ್ತಲೇ ಕೊನೆಯುಸಿರೆಳೆದ ಘಟನೆ ಶನಿವಾರ ರಾತ್ರಿ ಉಡುಪಿಯ‌ ಇನ್ನಂಜೆಯಲ್ಲಿ‌ ನಡೆದಿದೆ.

Advertisement

ಕುರ್ಕಾಲು ಸುಭಾಸ್ ನಗರ ನಿವಾಸಿ, ರಾಜ್ಯ ಮಟ್ಟದ ಹಲವಾರು ತಂಡಗಳಲ್ಲಿ ಆಟಗಾರನಾಗಿ ಆಡಿರುವ ಪಕ್ಕಿ ದೇವು ಯಾನೆ ದೇವರಾಜ್ (33) ಮೃತ ವಾಲಿವಾಲ್ ಆಟಗಾರ.

ಶನಿವಾರ ರಾತ್ರಿ ಇನ್ನಂಜೆಯಲ್ಲಿ‌ ನಡೆಯುತ್ತಿದ್ದ ಇನ್ನಂಜೆ ಪ್ರೀಮಿಯರ್ ಲೀಗ್ ಪಂದ್ಯಾವಳಿಯಲ್ಲಿ ಇನ್ನಂಜೆ ಚಾಲೆಂಜರ್ಸ್ ತಂಡದ ಪರವಾಗಿ ಆಟವಾಡುತ್ತಿದ್ದ ದೇವರಾಜ್ ಅವರು ರಾತ್ರಿ ಒಂದು ಗಂಟೆಯ ವೇಳೆಗೆ ಆಟವಾಡುತ್ತಿದ್ದಾಗಲೇ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದರು. ಕೂಡಲೇ ಅವರನ್ನು ಉಡುಪಿ ಆಸ್ಪತ್ರೆಗೆ ಕರೆದೊಯ್ದಿದ್ದು, ಅಷ್ಟರಲ್ಲೇ‌ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು.

ಇದನ್ನೂ ಓದಿ:ಕಂಬಳ ಕುತೂಹಲ: ಕುಟ್ಟಿ, ರಾಜ, ಧೋನಿ, ಮುಕೇಶ, ಚೆನ್ನ .. ಕಂಬಳದ ಕೋಣಗಳ ಹೆಸರಿನ ರೋಚಕತೆ

ಅವಿವಾಹಿತರಾಗಿದ್ದ ಅವರು ನಾಲ್ಕು ತಿಂಗಳ ಹಿಂದಷ್ಟೇ ತಂದೆಯನ್ನು ಕಳೆದುಕೊಂಡಿದ್ದು, ತಾಯಿ ಮತ್ತು ಐದು ಮಂದಿ ಸಹೋದರಿಯರನ್ನು ಅಗಲಿದ್ದಾರೆ.

Advertisement

ರಾಜ್ಯ ಮಟ್ಟದ ಆಟಗಾರ: ರಾಜ್ಯ ಮಟ್ಟದ ಹಲವಾರು ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದ ಅವರು ಆರಂಭದಲ್ಲಿ ಕುರ್ಕಾಲು ಸುಭಾಸ್ ನಗರ ತಂಡದ ಆಟಗಾರನಾಗಿ, ಬಳಿಕ ರಾಜ್ಯ ಮಟ್ಟದ ವಿವಿಧ ತಂಡಗಳಲ್ಲಿ ಆಟಗಾರನಾಗಿ  ವಾಲಿಬಾಲ್ ಆಟದಲ್ಲಿ ನಿರತರಾಗಿದ್ದರು.

ಉತ್ತರ ಕನ್ನಡದ ವಿವಿಧ ತಂಡಗಳ ಪರವಾಗಿಯೂ ಆಟವಾಡಿದ್ದ ಅವರು ಪಕ್ಕಿ ದೇವು ಎಂದೇ ಪರಿಚಿತನಾಗಿದ್ದರು. ಅವರ ಅಕಾಲಿಕ ಅಗಲುವಿಕೆ ವಾಲಿಬಾಲ್ ಆಟಗಾರರು ಮತ್ತು ಅಪಾರ‌ ಅಭಿಮಾನಿಗಳನ್ನು ಶೋಕ ಸಾಗರದಲ್ಲಿ‌ ಮುಳುಗಿಸಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮತ್ತಷ್ಟು ಬಿಗಿ ಕ್ರಮ : ರಾತ್ರಿ 8ರಿಂದ ಮಾಲ್‌ ಮುಚ್ಚಲು ಆದೇಶ

ಅವರ ಸ್ಮರಣಾರ್ಥವಾಗಿ ಇನ್ನಂಜೆ ಪ್ರೀಮಿಯರ್ ಲೀಗ್ ವಾಲಿಬಾಲ್ ಪಂದ್ಯಾವಳಿಯನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿದ್ದು, ವಿವಿಧೆಡೆ ಪಂದ್ಯಾವಳಿಯ ನಡುವೆಯೇ ಸಂತಾಪ ಸೂಚಕ ಸಭೆ ನಡೆಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next