Advertisement

ವರಿಷ್ಠರಿಂದ ಗ್ರೀನ್‌ ಸಿಗ್ನಲ್‌ ಸಿಕ್ಕರೆ ಮಾಸಾಂತ್ಯಕ್ಕೆ ಸಂಪುಟ ಸರ್ಜರಿ

10:08 PM Nov 04, 2022 | Team Udayavani |

ಬೆಂಗಳೂರು: ಪಕ್ಷದ ವರಿಷ್ಠರಿಂದ ಸೂಚನೆ ಬಂದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ದೆಹಲಿಗೆ ತೆರಳಲಿದ್ದಾರೆ.

Advertisement

ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ವರಿಷ್ಠರು ಬುಲಾವ್‌ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಸಂಪುಟ ವಿಸ್ತರಣೆಗೆ ಒತ್ತಡ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವರಿಷ್ಠರ ಗಮನಕ್ಕೆ ಮುಖ್ಯಮಂತ್ರಿಯವರು ವಿಚಾರ ತಂದಿದ್ದರು.

ದೀಪಾವಳಿ ನಂತರ ಬರಲು ತಿಳಿಸಿದ್ದರು. ಹೀಗಾಗಿ, ದೆಹಲಿಯ ವರಿಷ್ಠರ ಸಂದೇಶಕ್ಕಾಗಿ ಕಾಯುತ್ತಿದ್ದು, ಭಾನುವಾರ ಬೆಳಗ್ಗೆ ಕಾರ್ಯಕ್ರಮ ಮುಗಿಸಿ ತೆರಳುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ವರಿಷ್ಠರು ಒಪ್ಪಿಗೆ ಕೊಟ್ಟರೆ ಈ ಮಾಸಾಂತ್ಯಕ್ಕೆ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next