Advertisement

ಸ್ವಯಂಪ್ರೇರಿತ ಹಾಫ್ ಲಾಕ್‌ಡೌನ್‌

07:07 AM Jul 07, 2020 | Lakshmi GovindaRaj |

ಸಕಲೇಶಪುರ: ಜಿಲ್ಲೆಯಲ್ಲಿ ಕೋವಿಡ್‌ 19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಸ್ವಯಂಪ್ರೇರಿತರಾಗಿ ಹಾಫ್ ಲಾಕ್‌ ಡೌನ್‌ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಎಚ್‌.ಕೆ.ಕುಮಾರಸ್ವಾಮಿ ಹೇಳಿದರು. ಸೋಮವಾರ ಪಟ್ಟಣದ ಪುರಭವನದಲ್ಲಿ ಆಯೋಜಿಸಲಾಗಿದ್ದ ತಾಲೂಕು ಆಡಳಿತ, ಜನಪ್ರತಿನಿಧಿಗಳು ಹಾಗೂ ವರ್ತಕರ ಸಭೆಯಲ್ಲಿ ಮಾತನಾಡಿದರು.

Advertisement

ಹಾಸನ ಸೇರಿದಂತೆ ಪಕ್ಕದ ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯಲ್ಲಿ  ಕೊರೋನಾ ಪ್ರಕರಣಗಳು ಕಂಡು ಬಂದಿದೆ. ತಾಲೂಕಿನಲ್ಲೂ ಸಹ ಸುಮಾರು 3 ಪ್ರಕರಣಗಳು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ವಾರದ 6ದಿನ ಮುಂಜಾನೆ 7ರಿಂದ ಮಧ್ಯಾಹ್ನ 3ಗಂಟೆವರೆಗೆ ಅಂಗಡಿಗಳನ್ನು ತೆರೆಯಲು ತೀರ್ಮಾನಿಸಲಾಗಿದೆ. ಭಾನುವಾರ ಸರ್ಕಾರದ ಆದೇಶದಂತೆ ಸಂಪೂರ್ಣ ಲಾಕ್‌ಡೌನ್‌ ಇರುತ್ತದೆ.

ಮಧ್ಯಾಹ್ನ 3 ಗಂಟೆ ನಂತರ ಅಗತ್ಯ ವೈದ್ಯಕೀಯ ಸೇವೆಗಳಿಗೆ ಮಾತ್ರ ಅವಕಾಶವಿರುತ್ತದೆ ಎಂದರು. ಉಪವಿಭಾಗಾಧಿಕಾರಿ ಗಿರೀಶ್‌ ನಂದನ್‌  ಮಾತನಾಡಿ, ಕೋವಿಡ್‌ 19 ನಿಯಂತ್ರಣಕ್ಕೆ ವರ್ತಕರು ಸ್ವಯಂ ಪ್ರೇರಿತವಾಗಿ ಹಾಫ್ ಲಾಕ್‌ಡೌನ್‌ ಮಾಡಲು ಮುಂದಾಗಿರುವುದು ಶ್ಲಾಘನೀಯ ಎಂದರು. ವರ್ತಕರು ಗ್ರಾಹಕರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವಮತೆ ಜಾಗೃತಿ  ಮೂಡಿಸಬೇಕು ಎಂದು ಹೇಳಿದರು.

ವರ್ತಕರ ಸಂಘದ ಅಧ್ಯಕ್ಷ ಹರೀಶ್‌, ತಹಶೀಲ್ದಾರ್‌ ಮಂಜುನಾಥ್‌, ತಾಪಂ ಇಒ ಹರೀಶ್‌ , ಡಿವೈಎಸ್‌ಪಿ ಗೋಪಿ, ಸರ್ಕಲ್‌ ಇನ್ಸ್‌ಪೆಕ್ಟರ್‌ ಗಿರೀಶ್‌, ಪುರಸಭಾ ಮುಖ್ಯಾಧಿಕಾರಿ ಸ್ಟೀಫ‌ನ್‌ ಪ್ರಕಾಶ್‌, ತಾ ಪಂ  ಸದಸ್ಯ ಯಡೇಹಳ್ಳಿ ಮಂಜುನಾಥ, ಟಿಎಪಿಸಿಎಂಎಸ್‌ ಅಧ್ಯಕ್ಷ ಲೋಹಿತ್‌ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next