Advertisement

ಕಲುಷಿತ ನೀರು ಸೇವಿಸಿದ ಗ್ರಾಮಸ್ಥರಿಗೆ ವಾಂತಿ-ಭೇದಿ; ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿ

02:59 PM Jun 01, 2024 | Team Udayavani |

ಕೊಳ್ಳೇಗಾಲ: ತಾಲೂಕಿನ ಮಧುವನಹಳ್ಳಿಯ ಗ್ರಾಮಸ್ಥರು ಕೊಳವೆ ಬಾವಿಯ ಕಲುಷಿತ ನೀರು ಸೇವಿಸಿ ಹಲವರಿಗೆ ವಾಂತಿ-ಭೇದಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾದ ಹಿನ್ನಲೆ ಜಿಲ್ಲಾಧಿಕಾರಿ ಶಿಲ್ಪನಾಗ್ ಮೇ.26ರ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ನಗರದ ಹಲವರು ಸರ್ಕಾರಿ, ಖಾಸಗಿ ಆಸ್ಪತ್ರೆ ಹಾಗೂ ಕೆಲವರು ಮೈಸೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಾಂತಿ-ಭೇದಿಗೆ ಒಳಗಾದ ಕುಟುಂಬದವರ ಮನೆ-ಮನೆಗೆ ತೆರಳಿದ ಜಿಲ್ಲಾಧಿಕಾರಿ ಧೈರ್ಯದಿಂದ ಇರುವಂತೆ ಜನರಲ್ಲಿ ಮನವಿ ಮಾಡಿದರು.

ಆಸ್ಪತ್ರೆಯಲ್ಲಿ ದಾಖಲಾಗಿರುವ ಅಸ್ವಸ್ಥರನ್ನು ಭೇಟಿ ಮಾಡಿದ ಬಳಿಕ ಜಿಲ್ಲಾಧಿಕಾರಿ ಮಾತನಾಡಿ, ಮಳೆ ಬಂದ ಕಾರಣ ಎರಡು ಕೊಳವೆ ಬಾವಿಯ ನೀರು ಕಲುಷಿತಗೊಂಡಿರುವುದರಿಂದ ಗ್ರಾಮಸ್ಥರು ಆ ನೀರು ಸೇವಿಸಿ ಅಸ್ವಸ್ಥರಾಗಿದ್ದು, ಕೂಡಲೇ ಕೊಳವೆ ಬಾವಿ ನೀರು ಸೇವನೆ ಮಾಡದಂತೆ ಗ್ರಾಮಸ್ಥರಿಗೆ ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಹೇಳಿದರು.

ಒಂದು ವಾರದಲ್ಲಿ ಕಾವೇರಿ ಶುದ್ದ ಕುಡಿಯುವ ನೀರಿನ ಸೌಕರ್ಯ ಕಲ್ಪಿಸಲಾಗುವುದು. ಆಸ್ಪತ್ರೆಯಲ್ಲಿ 24×7 ವೈದ್ಯರು ಇರುವಂತೆ ಸೂಚನೆ ನೀಡಿರುವುದಾಗಿ ಹೇಳಿದರು.

ಭೇಟಿಯ ವೇಳೆ ಮಾಜಿ ಶಾಸಕ ನರೇಂದ್ರ ಚಾಮುಲ್, ನಿರ್ದೇಶಕ ನಂಜುಂಡಸ್ವಾಮಿ, ಶಿವಕುಮಾರ ಮತ್ತಿತರರು ಇದ್ದರು.

Advertisement

Advertisement

Udayavani is now on Telegram. Click here to join our channel and stay updated with the latest news.

Next