Advertisement

ನಮ್ಮ ಅಭ್ಯರ್ಥಿಯನ್ನೇ ಗೆಲ್ಲಿಸಿ, ಇಲ್ಲದಿದ್ರೆ ಅಭಿವೃದ್ಧಿ ಆಗಲ್ಲ; CM

04:24 PM Apr 05, 2017 | Sharanya Alva |

ಮೈಸೂರು: ಅಭಿವೃದ್ಧಿಯಾಗಬೇಕು ಅಂದ್ರೆ ನಮ್ಮ ಅಭ್ಯರ್ಥಿಯನ್ನೇ ಗೆಲ್ಲಿಸಬೇಕು. ಬೇರೆಯವರು ಗೆದ್ದರೆ ಎತ್ತು ಏರಿಗೆ, ಕೋಣ ನೀರಿಗೆ ಎಂಬಂತಾಗುತ್ತದೆ. ಇದರಿಂದಾಗಿ ಅಭಿವೃದ್ಧಿ ಕಾರ್ಯ ವಿಳಂಬವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Advertisement

ಬುಧವಾರ ಗುಂಡ್ಲುಪೇಟೆ ಉಪಚುನಾವಣೆಯ ಪ್ರಚಾರ ಸಮಾರಂಭದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಯಾಗಬೇಕಾದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನೇ ಗೆಲ್ಲಿಸಬೇಕು ಎಂದು ಬಹಿರಂಗವಾಗಿ ಕರೆ ನೀಡಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿದರೆ ರಸ್ತೆ ಮಾಡಿಕೊಡುತ್ತೇವೆ. ರಸ್ತೆ ಅಭಿವೃದ್ಧಿಗೆ ಹಣ ಕೊಡೋರು ನಾವೇ. ಹಾಗಾಗಿ ಬೇರೆಯವರು ಗೆದ್ದರೆ ಅಭಿವೃದ್ಧಿಯಾಗಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next