Advertisement

ಧ್ರುವನಾರಾಯಣ್‌ಗೆ ಮತ ನೀಡಿ: ಸುನೀಲ್‌ಬೋಸ್‌

09:26 PM Apr 15, 2019 | Team Udayavani |

ತಿ.ನರಸೀಪುರ: ಕೇಂದ್ರದಲ್ಲಿ ಮತ್ತೆ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾದರೆ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಎರಡೂ ಅಪಾಯಕ್ಕೆ ಸಿಲುಕುವ ಅಪಾಯ ಇರುವುದರಿಂದ ಜನರು ಎಚ್ಚೆತ್ತುಕೊಂಡು ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರವನ್ನು ಅಧಿಕಾರಕ್ಕೆ ತರಲು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿಸಬೇಕು ಎಂದು ಯುವ ಮುಖಂಡ ಹಾಗೂ ವಸತಿ ಯೋಜನೆ ಜಾಗೃತಿ ಸಮಿತಿ ಮಾಜಿ ಅಧ್ಯಕ್ಷ ಸುನೀಲ್‌ ಬೋಸ್‌ ಹೇಳಿದರು.

Advertisement

ತಾಲೂಕಿನ ಮುಸುನಕೊಪ್ಪಲು ಗ್ರಾಮದಲ್ಲಿ ಸೋಮವಾರ ಚಾಮರಾಜನಗರ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಬೆಂಬಲಿತ ಕಾಂಗ್ರೆಸ್‌ ಅಭ್ಯರ್ಥಿ ಆರ್‌.ಧ್ರುವನಾರಾಯಣ ಅವರ ಪರ ಮತಯಾಚಿಸಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 5ವರ್ಷಗಳ ಅವಧಿಯಲ್ಲಿ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಸರ್ಕಾರದ ಸಚಿವನೋರ್ವ ಬಹಿರಂಗವಾಗಿ ಸಂವಿಧಾನ ಬದಲಿಸುತ್ತೇವೆ ಅಂದರೂ ಕೇಳದ ಧೋರಣೆಯೇ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಪ್ರಯತ್ನ ಎಂಬುದನ್ನು ಸೂಕ್ಷ್ಮವಾಗಿ ಗಮನಿಸಬೇಕೆಂದರು.

ರೈತರು, ಬಡವರು ಹಾಗೂ ಹಿಂದುಳಿದ ವರ್ಗಗಳ ಸಾಮಾಜಿಕ ಅಭಿವೃದ್ಧಿಗೆ ಕೇಂದ್ರದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಬೇಕು. ರಾಜ್ಯದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಜಿಲ್ಲೆಯಲ್ಲಿ ಮಾಜಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ನಾಯಕತ್ವ ಬಲಪಡಿಸಲು ಚಾಮರಾಜನಗರ ಕ್ಷೇತ್ರದಲ್ಲಿ ಆರ್‌.ಧ್ರುವನಾರಾಯಣ ಅವರನ್ನು ಅತ್ಯಧಿಕ ಮತಗಳ ಅಂತರದಲ್ಲಿ ಗೆಲ್ಲಿಸಬೇಕು. ಅನಾರೋಗ್ಯದಿಂದಾಗಿ ಕೆಲವು ದಿನ ಪ್ರಚಾರಕ್ಕೆ ಬರಲಾಗಿಲ್ಲ. ಈ ಬಗ್ಗೆ ಕಾರ್ಯಕರ್ತರಲ್ಲಿ ಯಾವುದೇ ಗೊಂದಲ ಬೇಡ ಎಂದು ಹೇಳಿದರು.

ಸೋಸಲೆ ಗ್ರಾಮದಿಂದ ಆರಂಭಗೊಂಡ ಚುನಾವಣಾ ಪ್ರಚಾರ ಬೆನಕನಕನಹಳ್ಳಿ, ಎಂ.ಕೆಬ್ಬೇಹುಂಡಿ, ದೊಡ್ಡೇಬ್ಟಾಗಿಲು, ಕೊಳತ್ತೂರು, ಚಿದರವಳ್ಳಿ, ಉಕ್ಕಲಗೆರೆ ಹಾಗೂ ಅತ್ತಹಳ್ಳಿ ಗ್ರಾಮಗಳಲ್ಲಿ ಬಿರುಸಿನಿಂದ ನಡೆಯಿತು. ಪಿಕಾರ್ಡ್‌ ಬ್ಯಾಂಕ್‌ ಮಾಜಿ ಅಧ್ಯಕ್ಷ ಕೆ.ವಜ್ರೆಗೌಡ, ಜಿಪಂ ಮಾಜಿ ಸದಸ್ಯೆ ಎಂ.ಸುಧಾ,

Advertisement

ತಾಪಂ ಸದಸ್ಯ ಕುಕ್ಕೂರು ಗಣೇಶ, ಮಾಜಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನಸ್ವಾಮಿ, ಗ್ರಾಪಂ ಮಾಜಿ ಅಧ್ಯಕ್ಷ ಶಿವರಾಮು, ಕೆಬ್ಬೆ ನಾಗರಾಜು, ಅಕ್ಕೂರು ಗುರುಮೂರ್ತಿ, ಪುರಸಭಾ ಸದಸ್ಯ ಬಾದಾಮಿ ಮಂಜು, ಮುಖಂಡರಾದ ಕಾರ್ಗಳ್ಳಿ ಶಿವಸ್ವಾಮಿ ಕೆಬ್ಬೇಹುಂಡಿ ಮಹೇಶ, ವೀರಪ್ಪಒಡೆಯರಹುಂಡಿ ಬಸವರಾಜು, ಜೆ.ಅನೂಪ್‌ಗೌಡ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next