Advertisement
ತಾಲೂಕು ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ನರಗನಹಳ್ಳಿ ಶ್ರೀನಿವಾಸ್ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಿರುವುದು ಎಲ್ಲಾ ಕಾರ್ಯಕರ್ತರಲ್ಲಿ ಸಂತಸ ತಂದಿದೆ. ಎಚ್ಡಿಕೆ ರಾಜ್ಯದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ವ್ಯಕ್ತಿಯಾಗಿದ್ದು, ಈಗಾಗಲೇ 20 ತಿಂಗಳ ಅವಧಿಯಲ್ಲಿ ಮುಖ್ಯಮಂತ್ರಿಯಾಗಿ ರಾಜ್ಯದ ಜನರಿಗೆ ಉತ್ತಮ ಆಡಳಿತ ನೀಡಿದ್ದಾರೆ. ಮತ್ತೆ ರಾಜ್ಯದ ಜನರಿಗೆ 5 ವರ್ಷಗಳ ಕಾಲ ಸುಭದ್ರ ಸರ್ಕಾರವನ್ನು ಕುಮಾರಸ್ವಾಮಿ ನೀಡಲಿದ್ದಾರೆ ಎಂದು ಹೇಳಿದರು.
Related Articles
Advertisement
ದೇವನಹಳ್ಳಿ ಶಾಸಕ ನಿಸರ್ಗ ಎಲ್.ಎನ್ .ನಾರಾಯಣಸ್ವಾಮಿ ತಾಲೂಕಿಗೆ ಹೆಚ್ಚಿನ ಅನುದಾನವನ್ನು ತಂದು ತಾಲೂಕನ್ನು ಹೆಚ್ಚು ಅಭಿವೃದ್ಧಿ ಮಾಡಬೇಕು. ದಲಿತ ಉಪಮುಖ್ಯಮಂತ್ರಿಯಾಗಿ ನೇಮಕ ಮಾಡಿರುವುದಕ್ಕೆ ಪಕ್ಷದ ಮುಖಂಡರು ತಾಲೂಕಿನ ಛಲವಾದಿ ಸಮುದಾಯದಿಂದ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ರಾಜ್ಯ ಛಲವಾದಿ ಮಹಾಸಭಾ ಕಾರ್ಯಕಾರಿ ಸಮಿತಿ ಸದಸ್ಯ ವೆಂಕಟೇಶ್, ಆಟೋ ಚಾಲಕರ ಮತ್ತು ಮಾಲಿಕರ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ, ಸಂಘದ ಪದಾಧಿಕಾರಿಗಳಾದ ನಾಗೇಂದ್ರ, ಮುನಿರಾಜು, ಶಿವಶಂಕರ್, ಕಾಂಗ್ರೆಸ್ ಮುಖಂಡ ಚನ್ನಹಳ್ಳಿ ಮುನಿರಾಜು, ಗ್ರಾಪಂ ಸದಸ್ಯರಾದ ರಾಮಣ್ಣ, ರಾಜಶೇಖರ್, ಮತ್ತಿತರರು ಇದ್ದರು.
ಮುಖ್ಯಮಂತ್ರಿಯಾದ 24 ಗಂಟೆಗಳಲ್ಲೇ ರೈತರ ಸಾಲ ಮನ್ನಾ ಮಾಡು ತ್ತೇನೆಂದು ಹೇಳಿದ್ದ ಕುಮಾರಸ್ವಾಮಿ ಈಗ ಉಲ್ಟಾ ಹೊಡೆಯುತ್ತಿದ್ದಾರೆ. ಪೂರ್ಣಬಹುಮತ ಬಂದಿದ್ದರೆ ಸಾಲ ಮನ್ನಾ ಮಾಡುತ್ತಿದ್ದೆ ಎಂಬ ಹೇಳಿಕೆ ನೀಡುವ ಮೂಲಕ, ಸಾಲ ಮನ್ನಾ ಮಾಡಲಾಗುವುದಿಲ್ಲ ಎಂಬ ಸಂದೇಶ ನೀಡಿದ್ದಾರೆ. ಜನರ ವಿಶ್ವಾಸಕ್ಕೆ ದ್ರೋಹ ಬಗೆದು ಆಡಳಿತ ನಡೆಸುತ್ತಿದ್ದಾರೆ.ಕಿ ಬಿ.ರಾಜಣ್ಣ, ಬಿಜೆಪಿ, ಜಿಲ್ಲಾಧ್ಯಕ್ಷ.