Advertisement

ನಿರ್ಭೀತಿಯಿಂದ ಮತದಾನ ಮಾಡಿ

04:35 PM Jan 26, 2018 | Team Udayavani |

ಲಿಂಗಸುಗೂರು: ಮತದಾನ ನಮ್ಮ ಹಕ್ಕು ಹಾಗೂ ಕರ್ತವ್ಯ. ಮತದಾರರು ಚುನಾವಣೆಯಲ್ಲಿ ಯಾವುದೇ ಆಸೆ, ಆಮಿಷ, ಒತ್ತಡಕ್ಕೆ ಒಳಗಾಗದೇ ನಿರ್ಭೀತಿಯಿಂದ ಮತದಾನ ಮಾಡಬೇಕು ಎಂದು ಹಿರಿಯ ಶ್ರೇಣಿ ನ್ಯಾಯಾಧೀಶ
ಲಕ್ಷ್ಮೀಕಾಂತ ಜೆ. ಹೇಳಿದರು.

Advertisement

ಚುನಾವಣಾ ಆಯೋಗದಿಂದ ಗುರುವಾರ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ
ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

2011ರಿಂದ ಪ್ರತಿವರ್ಷ ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತಿದೆ. ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಲು ಅರಿವು ಮೂಡಿಸಬೇಕು. ಯಾವುದೇ ಜಾತಿ, ಧರ್ಮಗಳ ಹಾಗೂ ಯಾವುದೇ ಆಮಿಷಕ್ಕೊಳಗಾಗದೇ ತಮ್ಮ ಹಕ್ಕು ಚಲಾಯಿಸಬೇಕು ಎಂದರು. 

ಸಹಾಯಕ ಆಯುಕ್ತ ಎಂ.ಪಿ.ಮಾರುತಿ ಮಾತನಾಡಿ, ಪ್ರತಿವರ್ಷ ಮತದಾರರ ಪಟ್ಟಿಯನ್ನು ಪರಿಷ್ಕರಿಸಲಾಗುತ್ತದೆ.
ಹೊಸ ಮತದಾರರಿಗೆ ಮತದಾನದ ಮಹತ್ವ ಹಾಗೂ ಅದರ ಕರ್ತವ್ಯ ತಿಳಿಸಲು ಮತದಾರರ ದಿನವನ್ನು
ಆಚರಿಸಲಾಗುತ್ತಿದೆ. ಶೇ.60ರಿಂದ 70ರಷ್ಟು ಮತದಾನವಾಗುತ್ತಿದ್ದು, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಬೇಕಿದೆ ಎಂದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪುಷ್ಪಾ ಕಮ್ಮಾರ, ಡಿವೈಎಸ್‌ಪಿ ಎಸ್‌.ಎಚ್‌. ಸುಬೇದಾರ್‌, ಬಿಇಒ ಚಂದ್ರಶೇಖರ ಭಂಡಾರಿ, ಹಾಗೂ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next