Advertisement

ಮತದಾರರ ಪಟ್ಟಿ ಪರಿಶೀಲನೆ ಕಾರ್ಯ; ಜಿಲ್ಲಾಧಿಕಾರಿ ಭೇಟಿ

12:32 PM Oct 13, 2019 | Team Udayavani |

ಗದಗ: ಜಿಲ್ಲೆಯ ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಹಶೀಲ್ದಾರ್‌ ಕಚೇರಿಗಳಿಗೆ ಶನಿವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ನೆರೆ ಪರಿಹಾರ ಕಾರ್ಯ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪರಿಶೀಲಿಸಿದರು. ಈ ಕುರಿತು ಸ್ಥಳೀಯ ಅಧಿಕಾರಿಗಳು ಹಾಗೂ ತಹಶೀಲ್ದಾರರಿಂದ ಮಾಹಿತಿ ಪಡೆದರು. ಬಳಿಕ ಗೊಜನೂರ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶಿರಹಟ್ಟಿ ತಹಶೀಲ್ದಾರ್‌ ಯಲ್ಲಪ್ಪ ಗೋನೆಣ್ಣವರ, ಲಕ್ಷ್ಮೇಶ್ವರ ತಹಶೀಲ್ದಾರ್‌ ಭ್ರಮರಾಂಭ ಗುಬ್ಬಿಶೆಟ್ಟರ ಹಾಗೂ ಸಿಬ್ಬಂದಿ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next