Advertisement

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

01:16 AM Oct 04, 2024 | Team Udayavani |

ಮಂಗಳೂರು: ಇಪ್ಪತ್ತು ವರ್ಷಗಳಿಂದ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ಗ್ರಾ.ಪಂ., ತಾ. ಪಂ.ಸದಸ್ಯನಾಗಿ, ಜಿಲ್ಲಾ ಪಂಚಾಯತ್‌ನಲ್ಲಿ 2 ಬಾರಿ ಸದಸ್ಯನಾಗಿ, ಜಿ.ಪಂ. ಅಧ್ಯಕ್ಷನಾಗಿ ಸ್ಥಳೀಯ ಸಂಸ್ಥೆಗಳ ಅರಿವು ಇರುವುದರಿಂದ ಪರಿಷತ್‌ನಲ್ಲಿ ಈ ಬಗ್ಗೆ ಪರಿಣಾಮಕಾರಿಯಾಗಿ ಕೆಲಸ ಮಾಡಲು ಅವಕಾಶ ದೊರೆತಿದೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ ಹೇಳಿದ್ದಾರೆ.

Advertisement

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮ ಪತ್ರ ಸಲ್ಲಿಕೆ ವೇಳೆ ಮಾತನಾಡಿದ ಅವರು, ಈ ಚುನಾವಣೆಯ ಮತದಾ ರರು ಸ್ಥಳೀಯ ಸಂಸ್ಥೆಗಳ ಜನಪ್ರತಿ ನಿಧಿಗಳು. ಯಾರು ಗೆದ್ದು ಬಂದರೆ ತಮಗೆ ನ್ಯಾಯ ಸಿಗಲಿದೆ ಎನ್ನುವ ಅರಿವು ಅವರಿಗಿದೆ. ಮತದಾರರ ಒಲವು ನನ್ನ ಪರವಿದೆ ಎಂದರು.

30 ವರ್ಷಗಳಿಂದ ಪಕ್ಷದಲ್ಲಿ ಕೆಲಸ ಮಾಡಿರುವೆ. ಆ ನೆಲೆಯಲ್ಲಿ ಪಕ್ಷ ನನ್ನನ್ನು ಗುರುತಿಸಿ ಸ್ಪರ್ಧೆಗೆ ಅವಕಾಶ ಕಲ್ಪಿಸಿದೆ. ಜಿ.ಪಂ. ಅಧ್ಯಕ್ಷನಾಗಿದ್ದಾಗ ಸ್ವಂತ ಕಟ್ಟಡ ನಿರ್ಮಾಣ, ಎಲ್ಲ ಗ್ರಾ.ಪಂ.ಗಳ ಕಂಪ್ಯೂಟರೀಕರಣ ಸಾಧ್ಯವಾ ಯಿತು. ಇನ್ನು ಮುಂದಕ್ಕೆ ಸ್ಥಳೀಯ ಸಂಸ್ಥೆಗಳಿಗೆ ಮೂಲ ಸೌಕರ್ಯ ಸಹಿತ ಎಲ್ಲ ಅಗತ್ಯಗಳನ್ನು ಪೂರೈಸಲು ಬದ್ಧ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಅಶೋಕ್‌ ಕೊಡವೂರು, ಮುಖಂಡರಾದ ಪ್ರಸಾದ್‌ ರಾಜ್‌ ಕಾಂಚನ್‌, ಮುನಿಯಾಲು ಉದಯಕುಮಾರ ಶೆಟ್ಟಿ ಮತ್ತಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next